Latest

ಆಟೋದಲ್ಲಿ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್, ಗಾಂಜಾ ವಶ

ಹುಣಸೂರು: ಪ್ಯಾಸೆಂಜರ್ ಆಟೋ ಬಳಸಿಕೊಂಡು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಯುವಕನನ್ನು ಹುಣಸೂರು ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಯಿಂದ ಲಕ್ಷಾಂತರ ಮೌಲ್ಯದ ಗಾಂಜಾ ಹಾಗೂ ಆಟೋ ವಶಪಡಿಸಿಕೊಳ್ಳಲಾಗಿದೆ.

ಬಂಧಿತ ವ್ಯಕ್ತಿ ಪಿರಿಯಾಪಟ್ಟಣ ತಾಲೂಕಿನ ಪಂಚವಳ್ಳಿ ಗ್ರಾಮದ ಸಯ್ಯದ್ ಯೂನಸ್. ಈತನಿಂದ ಸುಮಾರು 926 ಗ್ರಾಂ ಒಣ ಗಾಂಜಾ ಹಾಗೂ ಪ್ಯಾಸೆಂಜರ್ ಆಟೋ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು ₹50,000 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನಿಂದ ಪಂಚವಳ್ಳಿ ಕಡೆಗೆ ಗಾಂಜಾ ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ಹುಣಸೂರು ನಗರ ಠಾಣೆ ಪೊಲೀಸರು ಹಾಳಗೆರೆ ಜಂಕ್ಷನ್ ಬಳಿ ತಪಾಸಣೆ ನಡೆಸಿದ್ದು, ಈ ವೇಳೆ ಆಟೋದಲ್ಲಿ ಸಾಗಿಸಲಾಗುತ್ತಿದ್ದ ಗಾಂಜಾ ಪತ್ತೆಯಾಗಿದೆ. ವಿಚಾರಣೆ ವೇಳೆ ಆರೋಪಿ ಹಣ ಗಳಿಕೆಯ ಹಿನ್ನಲೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದುದಾಗಿ ಒಪ್ಪಿಗೆ ನೀಡಿದ್ದಾನೆ.

ಈ ಕಾರ್ಯಾಚರಣೆಯಲ್ಲಿ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್, ಎಸ್‌ಐಗಳು ಜಮೀರ್ ಅಹಮದ್, ಮಹಾಲಿಂಗಯ್ಯ ಮತ್ತು ಸಿಬ್ಬಂದಿ ಅರುಣ್, ಶ್ರೀರಾಜರತ್ನಂ, ಮಂಜುನಾಥ್, ಇರ್ಫಾನ್, ಮಹೇಂದ್ರ, ರವಿಕುಮಾರ್‌ ಭಾಗವಹಿಸಿದ್ದರು. ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವ ನೀಡಿದ್ದು, ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್ ತಂಡದ ಕಾರ್ಯಕ್ಷಮತೆಯನ್ನು ಶ್ಲಾಘಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago