Latest

ರೈತನ ಬಳಿ ಲಂಚ ಪಡೆಯುತ್ತಿದ್ದ ಪಿ ಡಿ ಓ ಲೋಕಾಯುಕ್ತರ ಬಲೆಗೆ!

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಎಂಬ ಗ್ರಾಮದಲ್ಲಿ ಇ ಸ್ವತ್ತು ಮಾಡಿ ಲಂಚದ ದುರಾಸೆಯಿಂದ ಲಂಚ ಕೇಳಿದ ಪಿ ಡಿ ಓ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕು ಬಿದ್ದಿದ್ದಾರೆ ಅದರಗುಂಚಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ ಡಿ ಕರಡಿಗುಡ್ಡ ಎಂಬ ವ್ಯಕ್ತಿಯೇ ಲೋಕಾಯುಕ್ತರ ಕೈಗೆ ಸಿಕ್ಕುಬಿದ್ದಿದ್ದಾರೆ ಎಂ ಡಿ ಕರಡಿಗುಡ್ಡ ಅವರು ಅದರಗುಂಚಿ ಗ್ರಾಮದ ನಿಂಗಪ್ಪ ಪಾಟೀಲ್ ಅವರ ಕಡೆಯಿಂದ ಎಂಟು ಸಾವಿರ ರೂ ಹಣವನ್ನು ಲಂಚವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ಮೇಲೆ ದಾಳಿ ಮಾಡಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಮತ್ತು ಲೋಕಾಯುಕ್ತ ಅಧಿಕಾರಿಗಳ ಬಲೆಯಲ್ಲಿ ಬಿದ್ದ ಕರಡಿಗುಡ್ಡ ಅವರ ಧಾರವಾಡ ದಲ್ಲಿರುವ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅದರಗುಂಚಿ ಗ್ರಾಮದ ರೈತ ನಿಂಗಪ್ಪ ಪಾಟೀಲ್ ಇ ಸ್ವತ್ತು ಮಾಡಿಕೊಡಿ ಎಂದು ಗ್ರಾಮ ಪಂಚಾಯತಿಗೆ ಹೋಗಿ ಕೇಳಿಕೊಂಡರೆ ಆಗ ಪಿ ಡಿ ಓ ಕರಡಿಗುಡ್ಡ ಅವರು ಸರೀ ನಾಳೆ ಬೆಳಿಗ್ಗೆ ಎಂಟು ಸಾವಿರ ರೂಪಾಯಿ ತೆಗೆದುಕೊಂಡು ಬಾ ಮಾಡಿಕೊಡುತ್ತೇನೆ ಎಂದು ಹೇಳಿ ಕಳುಹಿಸಿದ್ದರು ರೈತ ನಿಂಗಪ್ಪ ಪಾಟೀಲ್ ಕರಡಿಗುಡ್ಡ ಅವರು ಎಂಟು ಸಾವಿರ ರೂಪಾಯಿ ಲಂಚ ಕೇಳಿದ್ದಕ್ಕೇ ಕಂಗಾಲಾಗಿ ಗ್ರಾಮಸ್ಥರ ಜೊತೆ ಚರ್ಚಿಸಿ ಧಾರವಾಡ ಲೋಕಾಯುಕ್ತ ಅಧಿಕಾರಿಗಳ ಬಳಿ ಹೋಗಿ ವಿಷಯವನ್ನು ತಿಳಿಸಿದ್ದರು ಈ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ನಿಂಗಪ್ಪ ಪಾಟೀಲ್ ಅವರನ್ನ ಮುಂದೆ ಕಳುಹಿಸಿ ನಂತರ ಅದರಗುಂಚಿ ಪಂಚಾಯತಿ ಮೇಲೆ ದಾಳಿ ಮಾಡಿದ್ದರು ಇನ್ನೂ ಈ ಕಾರ್ಯಾಚಣೆಯಲ್ಲಿ ಲೋಕಾಯುಕ್ತ ಎಸ್ ಪಿ ಶ್ರೀ ಸತೀಶ್ ಚಿಟಗುಬ್ಬಿ, ಲೋಕಾಯುಕ್ತ ಡಿವೈಎಸ್ ಪಿ ಶ್ರೀ ವಿಜಯ್ ಬಿರಾದಾರ್, ಪೊಲೀಸ್ ಇನ್ಸಪೆಕ್ಟರ್ ರವರ ತಂಡ ದಾಳಿ ಮಾಡಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago