Latest

ರೈತನ ಬಳಿ ಲಂಚ ಪಡೆಯುತ್ತಿದ್ದ ಪಿ ಡಿ ಓ ಲೋಕಾಯುಕ್ತರ ಬಲೆಗೆ!

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಎಂಬ ಗ್ರಾಮದಲ್ಲಿ ಇ ಸ್ವತ್ತು ಮಾಡಿ ಲಂಚದ ದುರಾಸೆಯಿಂದ ಲಂಚ ಕೇಳಿದ ಪಿ ಡಿ ಓ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕು ಬಿದ್ದಿದ್ದಾರೆ ಅದರಗುಂಚಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ ಡಿ ಕರಡಿಗುಡ್ಡ ಎಂಬ ವ್ಯಕ್ತಿಯೇ ಲೋಕಾಯುಕ್ತರ ಕೈಗೆ ಸಿಕ್ಕುಬಿದ್ದಿದ್ದಾರೆ ಎಂ ಡಿ ಕರಡಿಗುಡ್ಡ ಅವರು ಅದರಗುಂಚಿ ಗ್ರಾಮದ ನಿಂಗಪ್ಪ ಪಾಟೀಲ್ ಅವರ ಕಡೆಯಿಂದ ಎಂಟು ಸಾವಿರ ರೂ ಹಣವನ್ನು ಲಂಚವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ಮೇಲೆ ದಾಳಿ ಮಾಡಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಮತ್ತು ಲೋಕಾಯುಕ್ತ ಅಧಿಕಾರಿಗಳ ಬಲೆಯಲ್ಲಿ ಬಿದ್ದ ಕರಡಿಗುಡ್ಡ ಅವರ ಧಾರವಾಡ ದಲ್ಲಿರುವ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅದರಗುಂಚಿ ಗ್ರಾಮದ ರೈತ ನಿಂಗಪ್ಪ ಪಾಟೀಲ್ ಇ ಸ್ವತ್ತು ಮಾಡಿಕೊಡಿ ಎಂದು ಗ್ರಾಮ ಪಂಚಾಯತಿಗೆ ಹೋಗಿ ಕೇಳಿಕೊಂಡರೆ ಆಗ ಪಿ ಡಿ ಓ ಕರಡಿಗುಡ್ಡ ಅವರು ಸರೀ ನಾಳೆ ಬೆಳಿಗ್ಗೆ ಎಂಟು ಸಾವಿರ ರೂಪಾಯಿ ತೆಗೆದುಕೊಂಡು ಬಾ ಮಾಡಿಕೊಡುತ್ತೇನೆ ಎಂದು ಹೇಳಿ ಕಳುಹಿಸಿದ್ದರು ರೈತ ನಿಂಗಪ್ಪ ಪಾಟೀಲ್ ಕರಡಿಗುಡ್ಡ ಅವರು ಎಂಟು ಸಾವಿರ ರೂಪಾಯಿ ಲಂಚ ಕೇಳಿದ್ದಕ್ಕೇ ಕಂಗಾಲಾಗಿ ಗ್ರಾಮಸ್ಥರ ಜೊತೆ ಚರ್ಚಿಸಿ ಧಾರವಾಡ ಲೋಕಾಯುಕ್ತ ಅಧಿಕಾರಿಗಳ ಬಳಿ ಹೋಗಿ ವಿಷಯವನ್ನು ತಿಳಿಸಿದ್ದರು ಈ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ನಿಂಗಪ್ಪ ಪಾಟೀಲ್ ಅವರನ್ನ ಮುಂದೆ ಕಳುಹಿಸಿ ನಂತರ ಅದರಗುಂಚಿ ಪಂಚಾಯತಿ ಮೇಲೆ ದಾಳಿ ಮಾಡಿದ್ದರು ಇನ್ನೂ ಈ ಕಾರ್ಯಾಚಣೆಯಲ್ಲಿ ಲೋಕಾಯುಕ್ತ ಎಸ್ ಪಿ ಶ್ರೀ ಸತೀಶ್ ಚಿಟಗುಬ್ಬಿ, ಲೋಕಾಯುಕ್ತ ಡಿವೈಎಸ್ ಪಿ ಶ್ರೀ ವಿಜಯ್ ಬಿರಾದಾರ್, ಪೊಲೀಸ್ ಇನ್ಸಪೆಕ್ಟರ್ ರವರ ತಂಡ ದಾಳಿ ಮಾಡಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago