Latest

ರೈತನ ಬಳಿ ಲಂಚ ಪಡೆಯುತ್ತಿದ್ದ ಪಿ ಡಿ ಓ ಲೋಕಾಯುಕ್ತರ ಬಲೆಗೆ!

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಎಂಬ ಗ್ರಾಮದಲ್ಲಿ ಇ ಸ್ವತ್ತು ಮಾಡಿ ಲಂಚದ ದುರಾಸೆಯಿಂದ ಲಂಚ ಕೇಳಿದ ಪಿ ಡಿ ಓ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕು ಬಿದ್ದಿದ್ದಾರೆ ಅದರಗುಂಚಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ ಡಿ ಕರಡಿಗುಡ್ಡ ಎಂಬ ವ್ಯಕ್ತಿಯೇ ಲೋಕಾಯುಕ್ತರ ಕೈಗೆ ಸಿಕ್ಕುಬಿದ್ದಿದ್ದಾರೆ ಎಂ ಡಿ ಕರಡಿಗುಡ್ಡ ಅವರು ಅದರಗುಂಚಿ ಗ್ರಾಮದ ನಿಂಗಪ್ಪ ಪಾಟೀಲ್ ಅವರ ಕಡೆಯಿಂದ ಎಂಟು ಸಾವಿರ ರೂ ಹಣವನ್ನು ಲಂಚವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ಮೇಲೆ ದಾಳಿ ಮಾಡಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಮತ್ತು ಲೋಕಾಯುಕ್ತ ಅಧಿಕಾರಿಗಳ ಬಲೆಯಲ್ಲಿ ಬಿದ್ದ ಕರಡಿಗುಡ್ಡ ಅವರ ಧಾರವಾಡ ದಲ್ಲಿರುವ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅದರಗುಂಚಿ ಗ್ರಾಮದ ರೈತ ನಿಂಗಪ್ಪ ಪಾಟೀಲ್ ಇ ಸ್ವತ್ತು ಮಾಡಿಕೊಡಿ ಎಂದು ಗ್ರಾಮ ಪಂಚಾಯತಿಗೆ ಹೋಗಿ ಕೇಳಿಕೊಂಡರೆ ಆಗ ಪಿ ಡಿ ಓ ಕರಡಿಗುಡ್ಡ ಅವರು ಸರೀ ನಾಳೆ ಬೆಳಿಗ್ಗೆ ಎಂಟು ಸಾವಿರ ರೂಪಾಯಿ ತೆಗೆದುಕೊಂಡು ಬಾ ಮಾಡಿಕೊಡುತ್ತೇನೆ ಎಂದು ಹೇಳಿ ಕಳುಹಿಸಿದ್ದರು ರೈತ ನಿಂಗಪ್ಪ ಪಾಟೀಲ್ ಕರಡಿಗುಡ್ಡ ಅವರು ಎಂಟು ಸಾವಿರ ರೂಪಾಯಿ ಲಂಚ ಕೇಳಿದ್ದಕ್ಕೇ ಕಂಗಾಲಾಗಿ ಗ್ರಾಮಸ್ಥರ ಜೊತೆ ಚರ್ಚಿಸಿ ಧಾರವಾಡ ಲೋಕಾಯುಕ್ತ ಅಧಿಕಾರಿಗಳ ಬಳಿ ಹೋಗಿ ವಿಷಯವನ್ನು ತಿಳಿಸಿದ್ದರು ಈ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ನಿಂಗಪ್ಪ ಪಾಟೀಲ್ ಅವರನ್ನ ಮುಂದೆ ಕಳುಹಿಸಿ ನಂತರ ಅದರಗುಂಚಿ ಪಂಚಾಯತಿ ಮೇಲೆ ದಾಳಿ ಮಾಡಿದ್ದರು ಇನ್ನೂ ಈ ಕಾರ್ಯಾಚಣೆಯಲ್ಲಿ ಲೋಕಾಯುಕ್ತ ಎಸ್ ಪಿ ಶ್ರೀ ಸತೀಶ್ ಚಿಟಗುಬ್ಬಿ, ಲೋಕಾಯುಕ್ತ ಡಿವೈಎಸ್ ಪಿ ಶ್ರೀ ವಿಜಯ್ ಬಿರಾದಾರ್, ಪೊಲೀಸ್ ಇನ್ಸಪೆಕ್ಟರ್ ರವರ ತಂಡ ದಾಳಿ ಮಾಡಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

54 minutes ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

1 hour ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

1 hour ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

7 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

7 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

7 hours ago