Latest

ರೈತನ ಬಳಿ ಲಂಚ ಪಡೆಯುತ್ತಿದ್ದ ಪಿ ಡಿ ಓ ಲೋಕಾಯುಕ್ತರ ಬಲೆಗೆ!

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಎಂಬ ಗ್ರಾಮದಲ್ಲಿ ಇ ಸ್ವತ್ತು ಮಾಡಿ ಲಂಚದ ದುರಾಸೆಯಿಂದ ಲಂಚ ಕೇಳಿದ ಪಿ ಡಿ ಓ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕು ಬಿದ್ದಿದ್ದಾರೆ ಅದರಗುಂಚಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂ ಡಿ ಕರಡಿಗುಡ್ಡ ಎಂಬ ವ್ಯಕ್ತಿಯೇ ಲೋಕಾಯುಕ್ತರ ಕೈಗೆ ಸಿಕ್ಕುಬಿದ್ದಿದ್ದಾರೆ ಎಂ ಡಿ ಕರಡಿಗುಡ್ಡ ಅವರು ಅದರಗುಂಚಿ ಗ್ರಾಮದ ನಿಂಗಪ್ಪ ಪಾಟೀಲ್ ಅವರ ಕಡೆಯಿಂದ ಎಂಟು ಸಾವಿರ ರೂ ಹಣವನ್ನು ಲಂಚವಾಗಿ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ಮೇಲೆ ದಾಳಿ ಮಾಡಿ ಪ್ರಕರಣವನ್ನು ಬಯಲಿಗೆಳೆದಿದ್ದಾರೆ ಮತ್ತು ಲೋಕಾಯುಕ್ತ ಅಧಿಕಾರಿಗಳ ಬಲೆಯಲ್ಲಿ ಬಿದ್ದ ಕರಡಿಗುಡ್ಡ ಅವರ ಧಾರವಾಡ ದಲ್ಲಿರುವ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಅದರಗುಂಚಿ ಗ್ರಾಮದ ರೈತ ನಿಂಗಪ್ಪ ಪಾಟೀಲ್ ಇ ಸ್ವತ್ತು ಮಾಡಿಕೊಡಿ ಎಂದು ಗ್ರಾಮ ಪಂಚಾಯತಿಗೆ ಹೋಗಿ ಕೇಳಿಕೊಂಡರೆ ಆಗ ಪಿ ಡಿ ಓ ಕರಡಿಗುಡ್ಡ ಅವರು ಸರೀ ನಾಳೆ ಬೆಳಿಗ್ಗೆ ಎಂಟು ಸಾವಿರ ರೂಪಾಯಿ ತೆಗೆದುಕೊಂಡು ಬಾ ಮಾಡಿಕೊಡುತ್ತೇನೆ ಎಂದು ಹೇಳಿ ಕಳುಹಿಸಿದ್ದರು ರೈತ ನಿಂಗಪ್ಪ ಪಾಟೀಲ್ ಕರಡಿಗುಡ್ಡ ಅವರು ಎಂಟು ಸಾವಿರ ರೂಪಾಯಿ ಲಂಚ ಕೇಳಿದ್ದಕ್ಕೇ ಕಂಗಾಲಾಗಿ ಗ್ರಾಮಸ್ಥರ ಜೊತೆ ಚರ್ಚಿಸಿ ಧಾರವಾಡ ಲೋಕಾಯುಕ್ತ ಅಧಿಕಾರಿಗಳ ಬಳಿ ಹೋಗಿ ವಿಷಯವನ್ನು ತಿಳಿಸಿದ್ದರು ಈ ಮಾಹಿತಿ ಪಡೆದ ಲೋಕಾಯುಕ್ತ ಅಧಿಕಾರಿಗಳು ನಿಂಗಪ್ಪ ಪಾಟೀಲ್ ಅವರನ್ನ ಮುಂದೆ ಕಳುಹಿಸಿ ನಂತರ ಅದರಗುಂಚಿ ಪಂಚಾಯತಿ ಮೇಲೆ ದಾಳಿ ಮಾಡಿದ್ದರು ಇನ್ನೂ ಈ ಕಾರ್ಯಾಚಣೆಯಲ್ಲಿ ಲೋಕಾಯುಕ್ತ ಎಸ್ ಪಿ ಶ್ರೀ ಸತೀಶ್ ಚಿಟಗುಬ್ಬಿ, ಲೋಕಾಯುಕ್ತ ಡಿವೈಎಸ್ ಪಿ ಶ್ರೀ ವಿಜಯ್ ಬಿರಾದಾರ್, ಪೊಲೀಸ್ ಇನ್ಸಪೆಕ್ಟರ್ ರವರ ತಂಡ ದಾಳಿ ಮಾಡಿ ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

1 day ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

1 day ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

1 day ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

1 day ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

1 day ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

1 day ago