ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.

ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.

ಮರದ ಭಾರಕ್ಕೆ ಆರ್‌ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.

Related News

error: Content is protected !!