ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.
ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಮರದ ಭಾರಕ್ಕೆ ಆರ್ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…