ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.
ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಮರದ ಭಾರಕ್ಕೆ ಆರ್ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಪಾರ್ಟಿ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬೆಳಕಿಗೆ ಬಂದಿದೆ.…
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ–ಕೂಡಿಗೆ ಸರ್ಕಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,…
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತ…
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ಅನುಮಾನದಿಂದ ದಾರುಣ ಘಟನೆ ಸಂಭವಿಸಿದೆ. ಪತ್ನಿಯ ಮೇಲೆ ಅನುಮಾನ ಹೊಂದಿದ್ದ ವ್ಯಕ್ತಿಯೊಬ್ಬ…
ಬೆಂಗಳೂರು: ನಗರದಲ್ಲಿ ಪ್ರೇಮ ಸಂಬಂಧ ದಾರುಣ ಅಂತ್ಯ ಕಂಡ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದುವೆಗೆ…
ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿ ವಿಭಾಗದ ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ದಿನದಿಂದ…