ಸಿಲಿಕಾನ್ ಸಿಟಿ ಬೆಂಗಳೂರು ಎರಡು ದಿನಗಳಿಂದ ನಿರಂತರ ಮಳೆ ಮತ್ತು ಗಾಳಿಯಿಂದ ತತ್ತರಿಸಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ಓಕಳಿಪುರಂನಲ್ಲಿ ಭಾನುವಾರದ ಸಂಜೆ ಭಾರೀ ಗಾಳಿಗೆ ಬೃಹತ್ ಗಾತ್ರದ ಮರವೊಂದು ಮನೆಮೇಲೆ ಉರುಳಿ ಬಿದ್ದು ಭೀತಿ ಸೃಷ್ಠಿಸಿದೆ.
ಅಪಘಾತ ಸಂಭವಿಸಿದಾಗ ಮನೆಯೊಳಗೆ ಮೂವರು ವ್ಯಕ್ತಿಗಳು ಇದ್ದರು. ಮರ ಬಿದ್ದು ಬಡಿದ ತಕ್ಷಣವೇ ಅವರು ಕೂಡಲೇ ಎಚ್ಚರಿಸಿಕೊಂಡು ಹೊರಗೆ ಓಡಿ ಬಂದಿದ್ದಾರೆ. ಪರಿಣಾಮ ಯಾವುದೇ ಪ್ರಾಣಹಾನಿ ತಪ್ಪಿದ್ದು, ಮೂವರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಮರದ ಭಾರಕ್ಕೆ ಆರ್ಸಿಸಿ ಕಟ್ಟಡದ ಗೋಡೆಗೆ ತೀವ್ರ ಹಾನಿಯಾಗಿದೆ. ಮನೆಬದಿಯ ಭಾಗ ಸಂಪೂರ್ಣ ಜಖಂ ಆಗಿದ್ದು, ಮನೆಯ ವಾಸಸ್ಥಿತಿಗೆ ತೊಂದರೆಯಾಗಿರುವುದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪಾಲಿಕೆ ಸಿಬ್ಬಂದಿ ತಕ್ಷಣ ಧಾವಿಸಿ ಮರ ತೆಗೆಯುವ ಕಾರ್ಯವನ್ನು ಆರಂಭಿಸಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ಈ ಪ್ರದೇಶದಲ್ಲಿರುವ ಹಳೆಯ ಮರಗಳು ಅಪಾಯಕಾರಿಯಾಗಿವೆ ಎಂದು ಅವರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಕ್ರಮ ಕೈಗೊಳ್ಳಲಾಗದೆ ಇದ್ದ ಪರಿಣಾಮ ಈ ರೀತಿಯ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…