Categories: CinemaLatest

‘ಕೆಡಿ: ದಿ ಡೆವಿಲ್’ ಚಿತ್ರಕ್ಕೆ ಸಂಕಷ್ಟ: ವಿವಾದಾತ್ಮಕ ಹಾಡಿಗೆ ಕೇಂದ್ರ ಸರ್ಕಾರ ಬ್ರೇಕ್..!

ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಹಾಗೂ ನಿರ್ದೇಶಕ ಪ್ರೇಮ್ ಸಾರಥ್ಯದ ಬಹುನಿರೀಕ್ಷಿತ ‘ಕೆಡಿ: ದಿ ಡೆವಿಲ್’ ಚಿತ್ರಕ್ಕೆ ಹೊಸ ತೊಂದರೆ ಎದುರಾಗಿದೆ. ಚಿತ್ರದ ಮೊದಲ ಹಾಡಾದ ‘ಸರ್ಕೆ ಚುನಾರ್’ (ಕನ್ನಡದಲ್ಲಿ ‘ಸರ್ಸೆ ಸೆರಗ ಸರ್ಸೆ’) ಅತಿಯಾದ ಅಶ್ಲೀಲತೆ ಮತ್ತು ದ್ವಂದ್ವಾರ್ಥದ ಸಾಹಿತ್ಯ ಹೊಂದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತುರ್ತು ಗಮನ ಹರಿಸಿದೆ.

ಸಾರ್ವಜನಿಕ ನೈತಿಕತೆ ಮತ್ತು ಸಭ್ಯತೆಯ ಮಾನದಂಡಗಳನ್ನು ಮೀರುತ್ತಿದೆ ಎಂಬ ವಿವಾದ ಹೆಚ್ಚಾದ ಹಿನ್ನೆಲೆ, ಈ ಹಾಡನ್ನು ತಕ್ಷಣ ಪರಿಶೀಲಿಸುವಂತೆ ಕೇಂದ್ರವು ಸೆನ್ಸಾರ್ ಮಂಡಳಿಗೆ (CBFC) ಸೂಚನೆ ನೀಡಿದೆ. ನಿಯಮ ಉಲ್ಲಂಘನೆ ದೃಢಪಟ್ಟಲ್ಲಿ, ಹಾಡನ್ನು ಎಲ್ಲಾ ಡಿಜಿಟಲ್ ವೇದಿಕೆಗಳಿಂದ ತೆಗೆದುಹಾಕಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ಈ ಹಾಡು ಬಿಡುಗಡೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ವಿಶೇಷವಾಗಿ ಧ್ರುವ ಸರ್ಜಾ ಮತ್ತು ನೋರಾ ಫತೇಹಿ ಕಾಣಿಸಿಕೊಂಡಿರುವ ದೃಶ್ಯಗಳು ಹಾಗೂ ನೃತ್ಯ ಸಂಯೋಜನೆ ಅತಿರೇಕದ ಅಶ್ಲೀಲತೆಯಿಂದ ಕೂಡಿದೆ ಎಂದು ಅನೇಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ದೂರುಗಳು ದಾಖಲಾಗಿದ್ದವು.

ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿರುವ ಈ ಚಿತ್ರಕ್ಕೆ ಈ ಬೆಳವಣಿಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಒಂದು ವೇಳೆ ಸೆನ್ಸಾರ್ ಮಂಡಳಿ ಹಾಡನ್ನು ತೆಗೆದುಹಾಕಲು ತೀರ್ಮಾನಿಸಿದರೆ, ಚಿತ್ರತಂಡವು ಅದನ್ನು ಮರುಸಂಪಾದನೆ ಮಾಡುವುದು ಅಥವಾ ಸಂಪೂರ್ಣವಾಗಿ ಕೈಬಿಡುವುದು ಅನಿವಾರ್ಯವಾಗಬಹುದು.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago