ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಎಂ.ಎಸ್ಸಿ ಪದವೀಧರೆ ರೆಹಾನಾ ಅವರಿಗೆ ಶಹಜಹಾನ್ ಎಂಬ ಯುವಕನೊಂದಿಗೆ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿತ್ತು. ಮದುವೆ ಸಿದ್ಧತೆಗಳು ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿಶ್ಚಿತಾರ್ಥದ ಬಳಿಕ ಶಹಜಹಾನ್, ರೆಹಾನಾ ಜೊತೆ ಫೋನ್ನಲ್ಲಿ ಮಾತನಾಡುವ ವೇಳೆ ಅವಳಿಗೆ ಮಾನಸಿಕ ಹಿಂಸೆ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ. “ನನಗೆ ನೀನು ಇಷ್ಟವಿಲ್ಲ”, “ನಿನ್ನನ್ನು ನೋಡಿದರೆ ಯಾವುದೇ ಭಾವನೆ ಬರೋದಿಲ್ಲ”, “ನನಗೆ ಈಗಾಗಲೇ ನಾಲ್ಕು ಜನ ಗರ್ಲ್ಫ್ರೆಂಡ್ಸ್ ಇದ್ದಾರೆ” ಎಂಬಂತಹ ಮಾತುಗಳನ್ನು ಹೇಳಿ ಅವಳನ್ನು ಅವಮಾನಿಸುತ್ತಿದ್ದನು ಎಂದು ಹೇಳಲಾಗಿದೆ. ಆರಂಭದಲ್ಲಿ ಇದನ್ನು ತಮಾಷೆ ಎಂದುಕೊಂಡ ರೆಹಾನಾ, ನಂತರ ಆತನ ಮಾತುಗಳಿಂದ ತೀವ್ರವಾಗಿ ನೋವಿಗೆ ಒಳಗಾಗಿದ್ದಾಳೆ.
ಈ ಮಾನಸಿಕ ಒತ್ತಡವನ್ನು ತಡೆಯಲಾರದೆ, ಏಪ್ರಿಲ್ 20ರಂದು ರೆಹಾನಾ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಮುನ್ನ 12 ಪುಟಗಳ ಡೆತ್ ನೋಟ್ ಬರೆದು ತನ್ನ ಅನುಭವಿಸಿದ ನೋವನ್ನು ವಿವರವಾಗಿ ದಾಖಲಿಸಿದ್ದಾಳೆ.
ಈ ಘಟನೆ ಸಮಾಜದ ಮುಂದೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಮದುವೆ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೆ, ನಿಶ್ಚಿತಾರ್ಥಕ್ಕೂ ಮುನ್ನವೇ ನಿರ್ಧಾರ ತಿಳಿಸಬಹುದಿತ್ತು. ಆದರೆ ಒಬ್ಬ ಯುವತಿಯ ಭಾವನೆಗಳೊಂದಿಗೆ ಆಟವಾಡಿ, ಅವಳನ್ನು ಮಾನಸಿಕವಾಗಿ ಕುಗ್ಗಿಸುವಂತಹ ವರ್ತನೆಗೆ ವಿರೋಧ ವ್ಯಕ್ತವಾಗುತ್ತಿದೆ.
ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…