ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಎಂ.ಎಸ್ಸಿ ಪದವೀಧರೆ ರೆಹಾನಾ ಅವರಿಗೆ ಶಹಜಹಾನ್ ಎಂಬ ಯುವಕನೊಂದಿಗೆ ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿತ್ತು. ಮದುವೆ ಸಿದ್ಧತೆಗಳು ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿಶ್ಚಿತಾರ್ಥದ ಬಳಿಕ ಶಹಜಹಾನ್, ರೆಹಾನಾ ಜೊತೆ ಫೋನ್ನಲ್ಲಿ ಮಾತನಾಡುವ ವೇಳೆ ಅವಳಿಗೆ ಮಾನಸಿಕ ಹಿಂಸೆ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ. “ನನಗೆ ನೀನು ಇಷ್ಟವಿಲ್ಲ”, “ನಿನ್ನನ್ನು ನೋಡಿದರೆ ಯಾವುದೇ ಭಾವನೆ ಬರೋದಿಲ್ಲ”, “ನನಗೆ ಈಗಾಗಲೇ ನಾಲ್ಕು ಜನ ಗರ್ಲ್ಫ್ರೆಂಡ್ಸ್ ಇದ್ದಾರೆ” ಎಂಬಂತಹ ಮಾತುಗಳನ್ನು ಹೇಳಿ ಅವಳನ್ನು ಅವಮಾನಿಸುತ್ತಿದ್ದನು ಎಂದು ಹೇಳಲಾಗಿದೆ. ಆರಂಭದಲ್ಲಿ ಇದನ್ನು ತಮಾಷೆ ಎಂದುಕೊಂಡ ರೆಹಾನಾ, ನಂತರ ಆತನ ಮಾತುಗಳಿಂದ ತೀವ್ರವಾಗಿ ನೋವಿಗೆ ಒಳಗಾಗಿದ್ದಾಳೆ.
ಈ ಮಾನಸಿಕ ಒತ್ತಡವನ್ನು ತಡೆಯಲಾರದೆ, ಏಪ್ರಿಲ್ 20ರಂದು ರೆಹಾನಾ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಮುನ್ನ 12 ಪುಟಗಳ ಡೆತ್ ನೋಟ್ ಬರೆದು ತನ್ನ ಅನುಭವಿಸಿದ ನೋವನ್ನು ವಿವರವಾಗಿ ದಾಖಲಿಸಿದ್ದಾಳೆ.
ಈ ಘಟನೆ ಸಮಾಜದ ಮುಂದೆ ಹಲವು ಪ್ರಶ್ನೆಗಳನ್ನು ಎತ್ತಿದೆ. ಮದುವೆ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೆ, ನಿಶ್ಚಿತಾರ್ಥಕ್ಕೂ ಮುನ್ನವೇ ನಿರ್ಧಾರ ತಿಳಿಸಬಹುದಿತ್ತು. ಆದರೆ ಒಬ್ಬ ಯುವತಿಯ ಭಾವನೆಗಳೊಂದಿಗೆ ಆಟವಾಡಿ, ಅವಳನ್ನು ಮಾನಸಿಕವಾಗಿ ಕುಗ್ಗಿಸುವಂತಹ ವರ್ತನೆಗೆ ವಿರೋಧ ವ್ಯಕ್ತವಾಗುತ್ತಿದೆ.
ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…