Crime

ಸರ್ಕಾರಿ ಉದ್ಯೋಗದ ನಂಬಿಕೆ: ನರ್ಸ್‌ಗೆ 1.65 ಲಕ್ಷ ರೂ. ವಂಚನೆ, ಉಡುಪಿಯಲ್ಲಿ ಪ್ರಕರಣ ದಾಖಲು

ಉಡುಪಿ: ಸರ್ಕಾರಿ ಉದ್ಯೋಗದ ಭರವಸೆ ನೀಡಿ ನರ್ಸ್‌ಗೊಬ್ಬರ ಕೈಯಿಂದ ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ ಮೂಲದ ರೇವತಿ (31) ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಪಡುಬಿದ್ರಿಯ ಸಚಿನ್ ಎಂಬಾತನ ಪರಿಚಯವಾಗಿತ್ತು. ಆತನು ತನ್ನನ್ನು ಸರ್ಕಾರಿ ನೌಕರಿ ಹೊಂದಿಸಬಲ್ಲ ವ್ಯಕ್ತಿಯಾಗಿ ಪರಿಚಯಿಸಿಕೊಂಡಿದ್ದನು.

ಸಚಿನ್, “ಮೇಲಾಧಿಕಾರಿಗಳಿಗೆ ಹಣ ನೀಡಬೇಕು, ನಂತರ ನೌಕರಿ ಪಕ್ಕಾ” ಎಂಬ ಮಾತುಗಳನ್ನು ನಂಬಿಸಿ, ಹಂತ ಹಂತವಾಗಿ 2024ರ ಏಪ್ರಿಲ್ 11ರಿಂದ ಮೇ 20ರವರೆಗೆ ರೇವತಿ ಅವರಿಂದ ಒಟ್ಟು ರೂ. 1,65,000 ಹಣ ಸ್ವೀಕರಿಸಿದ್ದಾನೆ ಎಂಬುದು ದೂರುದಾರೆಯ ವಾದ.

ಈಷ್ಟೇ ಅಲ್ಲದೆ, ಉದ್ಯೋಗದ ಪ್ರಕ್ರಿಯೆಗೆ ಅಗತ್ಯವಿದೆ ಎಂಬ ಕಾರಣದಿಂದಾಗಿ ರೇವತಿಯ ಪಾನ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ, ನರ್ಸಿಂಗ್ ಡಿಪ್ಲೊಮಾ ಸೇರಿದಂತೆ ಎಲ್ಲಾ ಮೂಲ ದಾಖಲೆಗಳನ್ನು ಕೂಡ ಪಡೆಯಲಾಗಿತ್ತು.

ಆದರೆ ಇಷ್ಟು ದಿನ ಕಳೆದರೂ ಯಾವುದೇ ರೀತಿಯ ಸರ್ಕಾರಿ ಉದ್ಯೋಗ ನೀಡದೇ, ಹಣ ಹಾಗೂ ದಾಖಲಾತಿಗಳನ್ನು ಕೂಡ ಹಿಂದಿರುಗಿಸದೇ ಮೋಸಮಾಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

6 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

6 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

6 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

6 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago