ಉಡುಪಿ: ಸರ್ಕಾರಿ ಉದ್ಯೋಗದ ಭರವಸೆ ನೀಡಿ ನರ್ಸ್ಗೊಬ್ಬರ ಕೈಯಿಂದ ಲಕ್ಷಕ್ಕೂ ಹೆಚ್ಚು ರೂಪಾಯಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ ಮೂಲದ ರೇವತಿ (31) ಎಂಬವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಪಡುಬಿದ್ರಿಯ ಸಚಿನ್ ಎಂಬಾತನ ಪರಿಚಯವಾಗಿತ್ತು. ಆತನು ತನ್ನನ್ನು ಸರ್ಕಾರಿ ನೌಕರಿ ಹೊಂದಿಸಬಲ್ಲ ವ್ಯಕ್ತಿಯಾಗಿ ಪರಿಚಯಿಸಿಕೊಂಡಿದ್ದನು.
ಸಚಿನ್, “ಮೇಲಾಧಿಕಾರಿಗಳಿಗೆ ಹಣ ನೀಡಬೇಕು, ನಂತರ ನೌಕರಿ ಪಕ್ಕಾ” ಎಂಬ ಮಾತುಗಳನ್ನು ನಂಬಿಸಿ, ಹಂತ ಹಂತವಾಗಿ 2024ರ ಏಪ್ರಿಲ್ 11ರಿಂದ ಮೇ 20ರವರೆಗೆ ರೇವತಿ ಅವರಿಂದ ಒಟ್ಟು ರೂ. 1,65,000 ಹಣ ಸ್ವೀಕರಿಸಿದ್ದಾನೆ ಎಂಬುದು ದೂರುದಾರೆಯ ವಾದ.
ಈಷ್ಟೇ ಅಲ್ಲದೆ, ಉದ್ಯೋಗದ ಪ್ರಕ್ರಿಯೆಗೆ ಅಗತ್ಯವಿದೆ ಎಂಬ ಕಾರಣದಿಂದಾಗಿ ರೇವತಿಯ ಪಾನ್ ಕಾರ್ಡ್, ಆಧಾರ್ ಕಾರ್ಡ್, ಜಾತಿ ಹಾಗೂ ಆದಾಯ ಪ್ರಮಾಣಪತ್ರ, ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ, ನರ್ಸಿಂಗ್ ಡಿಪ್ಲೊಮಾ ಸೇರಿದಂತೆ ಎಲ್ಲಾ ಮೂಲ ದಾಖಲೆಗಳನ್ನು ಕೂಡ ಪಡೆಯಲಾಗಿತ್ತು.
ಆದರೆ ಇಷ್ಟು ದಿನ ಕಳೆದರೂ ಯಾವುದೇ ರೀತಿಯ ಸರ್ಕಾರಿ ಉದ್ಯೋಗ ನೀಡದೇ, ಹಣ ಹಾಗೂ ದಾಖಲಾತಿಗಳನ್ನು ಕೂಡ ಹಿಂದಿರುಗಿಸದೇ ಮೋಸಮಾಡಿರುವುದಾಗಿ ದೂರಲಾಗಿದೆ. ಈ ಸಂಬಂಧ ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…