Latest

ತುಂಗಭದ್ರ ನದಿಯ ಸೇತುವೆ ದುರಸ್ತಿ; ವಾಹನ ಸವಾರರೇ ಎಚ್ಚರ!

ಹಾವೇರಿ ಜಿಲ್ಲೆಯಿಂದ ಬಳ್ಳಾರಿ ಜಿಲ್ಲೆಗೆ ಸಂಪರ್ಕಿಸುವ ಹಾವೇರಿ ತಾಲೂಕಿನ ಗ್ರಾಮಗಳಿಂದ ಬಳ್ಳಾರಿ ಜಿಲ್ಲೆಯ ಮೈಲಾರ, ಕುರವತ್ತಿ, ದಾವಣಗೆರೆ, ಹೊಳಲು, ಹಿರೇ ಹಡಗಲಿ, ಹೂವಿನ ಹಡಗಲಿ, ಕೂಡ್ಲಗಿ, ಬಳ್ಳಾರಿ, ಮಂತ್ರಾಲಯ ರಾಯಚೂರು ಹಾಗೂ ಆಂಧ್ರ ಪ್ರದೇಶ ರಾಜ್ಯಗಳಿಗೆ ಸಂಚಾರ ಮಾರ್ಗ ಗುತ್ತಲ ಪಟ್ಟಣದಿಂದ ಮೈಲಾರ ಮಧ್ಯೆ ಇರುವ ತುಂಗಭದ್ರ ನದಿಯ ಸೇತುವೆ ಸುಮಾರು 500 ಮೀ (ಅರ್ಧ ಕಿ ಮೀ) ಇದೆ ಈ ಸೇತುವೆ ಸುಮಾರು 40 ರಿಂದ 45 ವರ್ಷ ಹಳೆಯದಾಗಿದ್ದು.

ಸೇತುವೆ ತಡೆಗೋಡೆಗಳ ಸ್ಥಿತಿ ನೋಡಿದರೆ ಭಯವಾಗುತ್ತದೆ ಅಲ್ಲಲ್ಲಿ ತಡೆಗೋಡೆ ಬಿರುಕು ಬಿಟ್ಟಿವೆ. ಯಾವುದಾದರೂ ವಾಹನ ಆಯಾ ತಪ್ಪಿ ತಡೆಗೋಡೆಗೆ ತಗುಲಿದರೆ ತಡೆಗೋಡೆ ಕುಸಿಯುವುದು ಖಚಿತ. ಅಪ್ಪಿ ತಪ್ಪಿಯೂ ಸೇತುವೆಯಿಂದ ಕೆಳಗೆ ಬಿದ್ದರೆ ಬಿದ್ದವರು ನದಿಯ ಪಾಲಾಗುವುದರಲ್ಲಿ ಎರಡನೇ ಮಾತಿಲ್ಲ. ಇನ್ನು ಸೇತುವೆ ಮೇಲೆ ಅಲ್ಲಲ್ಲಿ ತಗ್ಗು ಗುಂಡಿಗಳಿರುತ್ತವೆ ಮಳೆ ಬಂದಾಗ ಈ ಸೇತುವಯ ಮೇಲೆ ಕೈಯ್ಯಲ್ಲಿ ಜೀವ ಬಿಗಿಹಿಡಿದುಕೊಂಡು ಸಂಚರಿಸಬೇಕು.

ಗುತ್ತಲ ಪಟ್ಟಣದಿಂದ ಮೈಲಾರಕ್ಕೆ ತೆರಳುವಾಗ ಸೇತುವೆಯ ಕೊನೆಗೆ ಎಡ ಭಾಗದಲ್ಲಿ ಮಣ್ಣು ಕುಸಿದಿರುತ್ತದೆ ರಾತ್ರಿ ಸಮಯದಲ್ಲಿ ಗೊತ್ತಾಗದೆ ಬಂದರೇ ದ್ವಿಚಕ್ರ ವಾಹನ ಸವಾರರು ಭೂ ಕುಸಿದ ಸ್ಥಳದಲ್ಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿರುವ ಸೇತುವೆಯ ಕಡೆ ಸಂಭಂಧ ಪಟ್ಟ ಅಧಿಕಾರಿಗಳು ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೋ ತಿಳಿಯುತ್ತಿಲ್ಲ ಇನ್ನೂ ಸುಗಮ ಸಂಚಾರಕ್ಕೆ ಸಂಭಂದಪಟ್ಟ ಅಧಿಕಾರಿಗಳು ಯಾವಾಗ ಸರಿಪಡಿಸುತ್ತಾರೋ ಕಾದು ನೋಡಬೇಕಾಗಿದೆ.
ವರದಿ : ಶಿವರಾಜ್

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

2 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

2 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

2 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

2 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

22 hours ago