ಹಾವೇರಿ ಜಿಲ್ಲೆಯಿಂದ ಬಳ್ಳಾರಿ ಜಿಲ್ಲೆಗೆ ಸಂಪರ್ಕಿಸುವ ಹಾವೇರಿ ತಾಲೂಕಿನ ಗ್ರಾಮಗಳಿಂದ ಬಳ್ಳಾರಿ ಜಿಲ್ಲೆಯ ಮೈಲಾರ, ಕುರವತ್ತಿ, ದಾವಣಗೆರೆ, ಹೊಳಲು, ಹಿರೇ ಹಡಗಲಿ, ಹೂವಿನ ಹಡಗಲಿ, ಕೂಡ್ಲಗಿ, ಬಳ್ಳಾರಿ, ಮಂತ್ರಾಲಯ ರಾಯಚೂರು ಹಾಗೂ ಆಂಧ್ರ ಪ್ರದೇಶ ರಾಜ್ಯಗಳಿಗೆ ಸಂಚಾರ ಮಾರ್ಗ ಗುತ್ತಲ ಪಟ್ಟಣದಿಂದ ಮೈಲಾರ ಮಧ್ಯೆ ಇರುವ ತುಂಗಭದ್ರ ನದಿಯ ಸೇತುವೆ ಸುಮಾರು 500 ಮೀ (ಅರ್ಧ ಕಿ ಮೀ) ಇದೆ ಈ ಸೇತುವೆ ಸುಮಾರು 40 ರಿಂದ 45 ವರ್ಷ ಹಳೆಯದಾಗಿದ್ದು.
ಸೇತುವೆ ತಡೆಗೋಡೆಗಳ ಸ್ಥಿತಿ ನೋಡಿದರೆ ಭಯವಾಗುತ್ತದೆ ಅಲ್ಲಲ್ಲಿ ತಡೆಗೋಡೆ ಬಿರುಕು ಬಿಟ್ಟಿವೆ. ಯಾವುದಾದರೂ ವಾಹನ ಆಯಾ ತಪ್ಪಿ ತಡೆಗೋಡೆಗೆ ತಗುಲಿದರೆ ತಡೆಗೋಡೆ ಕುಸಿಯುವುದು ಖಚಿತ. ಅಪ್ಪಿ ತಪ್ಪಿಯೂ ಸೇತುವೆಯಿಂದ ಕೆಳಗೆ ಬಿದ್ದರೆ ಬಿದ್ದವರು ನದಿಯ ಪಾಲಾಗುವುದರಲ್ಲಿ ಎರಡನೇ ಮಾತಿಲ್ಲ. ಇನ್ನು ಸೇತುವೆ ಮೇಲೆ ಅಲ್ಲಲ್ಲಿ ತಗ್ಗು ಗುಂಡಿಗಳಿರುತ್ತವೆ ಮಳೆ ಬಂದಾಗ ಈ ಸೇತುವಯ ಮೇಲೆ ಕೈಯ್ಯಲ್ಲಿ ಜೀವ ಬಿಗಿಹಿಡಿದುಕೊಂಡು ಸಂಚರಿಸಬೇಕು.
ಗುತ್ತಲ ಪಟ್ಟಣದಿಂದ ಮೈಲಾರಕ್ಕೆ ತೆರಳುವಾಗ ಸೇತುವೆಯ ಕೊನೆಗೆ ಎಡ ಭಾಗದಲ್ಲಿ ಮಣ್ಣು ಕುಸಿದಿರುತ್ತದೆ ರಾತ್ರಿ ಸಮಯದಲ್ಲಿ ಗೊತ್ತಾಗದೆ ಬಂದರೇ ದ್ವಿಚಕ್ರ ವಾಹನ ಸವಾರರು ಭೂ ಕುಸಿದ ಸ್ಥಳದಲ್ಲಿ ಬಿದ್ದು ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ಇಷ್ಟೆಲ್ಲಾ ಸಮಸ್ಯೆಗಳಿರುವ ಸೇತುವೆಯ ಕಡೆ ಸಂಭಂಧ ಪಟ್ಟ ಅಧಿಕಾರಿಗಳು ಯಾಕೆ ನಿರ್ಲಕ್ಷ್ಯ ವಹಿಸುತ್ತಿದ್ದಾರೋ ತಿಳಿಯುತ್ತಿಲ್ಲ ಇನ್ನೂ ಸುಗಮ ಸಂಚಾರಕ್ಕೆ ಸಂಭಂದಪಟ್ಟ ಅಧಿಕಾರಿಗಳು ಯಾವಾಗ ಸರಿಪಡಿಸುತ್ತಾರೋ ಕಾದು ನೋಡಬೇಕಾಗಿದೆ.
ವರದಿ : ಶಿವರಾಜ್
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…