Latest

ಭಾರತದಿಂದ ಸಹಾಯ ಪಡೆದು ಭಾರತಕ್ಕೆ ಚೂರಿ ಹಾಕಲು ನಿಂತ ಟರ್ಕಿ; ಜಮ್ಮು ಕಾಶ್ಮೀರದ ವಿಷಯ ಪ್ರಸ್ತಾಪ.

ಭೀಕರ ಭೂಕಂಪದಿಂದ ಕಂಗೆಟ್ಟು ಹೋಗಿರೋ ಟರ್ಕಿಗೆ ಭಾರತ ಅಪಾರ ಸಹಾಯ ಹಸ್ತ ಚಾಚಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆಪರೇಷನ್​ ದೋಸ್ತಿ ಹೆಸರಿನಲ್ಲಿ ಭಾರತದ ಸೇನೆ ಟರ್ಕಿಗೆ ತೆರಳಿ ಅಲ್ಲಿರುವ ಜನರ ಜೀವವನ್ನು ಕಾಪಾಡಿದೆ. ಮಾತ್ರವಲ್ಲದೇ ಎನ್‌ಡಿಆರ್‌ಎಫ್ ಯೋಧರನ್ನು ಕಳುಹಿಸಿದೆ. ಅಗತ್ಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳ ಜೊತೆಗೆ ತರಬೇತಿ ಪಡೆದ ಶ್ವಾನ ತಂಡವನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಇಷ್ಟೆಲ್ಲಾ ಮಾಡಿದ ಮೇಲೂ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ) ನಲ್ಲಿ, ಟರ್ಕಿಯು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರೋಧ ನಿಂತಿದೆ.
ಭಾರತದಿಂದ ಭಾರಿ ನೆರವು ಪಡೆದ ವಾರದ ನಂತರದಲ್ಲಿಯೇ ಟರ್ಕಿ ಭಾರತದ ವಿರುದ್ಧ ಹೇಳಿಕೆ ನೀಡಿದೆ. ಜಿನೀವಾದಲ್ಲಿ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್​ನಲ್ಲಿ ಟರ್ಕಿಯು, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಪ್ರಸ್ತಾಪಿಸಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಖಂಡಿಸಿದ್ದಾರೆ. ಒಐಸಿ ಈಗಾಗಲೇ ಈ ವಿಷಯದ ಕುರಿತು ಚರ್ಚಿಸಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ಮೂಲಕ ಕೋಮುವಾದ, ಪಕ್ಷಪಾತದಂಥ ಕಾರ್ಯ ಎಸಗುತ್ತಿದೆ ಎಂದಿದ್ದಾರೆ.

ಭ್ರಷ್ಟರ ಬೇಟೆ

Recent Posts

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

6 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

21 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

22 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago