ಭೀಕರ ಭೂಕಂಪದಿಂದ ಕಂಗೆಟ್ಟು ಹೋಗಿರೋ ಟರ್ಕಿಗೆ ಭಾರತ ಅಪಾರ ಸಹಾಯ ಹಸ್ತ ಚಾಚಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆಪರೇಷನ್ ದೋಸ್ತಿ ಹೆಸರಿನಲ್ಲಿ ಭಾರತದ ಸೇನೆ ಟರ್ಕಿಗೆ ತೆರಳಿ ಅಲ್ಲಿರುವ ಜನರ ಜೀವವನ್ನು ಕಾಪಾಡಿದೆ. ಮಾತ್ರವಲ್ಲದೇ ಎನ್ಡಿಆರ್ಎಫ್ ಯೋಧರನ್ನು ಕಳುಹಿಸಿದೆ. ಅಗತ್ಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳ ಜೊತೆಗೆ ತರಬೇತಿ ಪಡೆದ ಶ್ವಾನ ತಂಡವನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಇಷ್ಟೆಲ್ಲಾ ಮಾಡಿದ ಮೇಲೂ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ) ನಲ್ಲಿ, ಟರ್ಕಿಯು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರೋಧ ನಿಂತಿದೆ.
ಭಾರತದಿಂದ ಭಾರಿ ನೆರವು ಪಡೆದ ವಾರದ ನಂತರದಲ್ಲಿಯೇ ಟರ್ಕಿ ಭಾರತದ ವಿರುದ್ಧ ಹೇಳಿಕೆ ನೀಡಿದೆ. ಜಿನೀವಾದಲ್ಲಿ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ನಲ್ಲಿ ಟರ್ಕಿಯು, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಪ್ರಸ್ತಾಪಿಸಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಖಂಡಿಸಿದ್ದಾರೆ. ಒಐಸಿ ಈಗಾಗಲೇ ಈ ವಿಷಯದ ಕುರಿತು ಚರ್ಚಿಸಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ಮೂಲಕ ಕೋಮುವಾದ, ಪಕ್ಷಪಾತದಂಥ ಕಾರ್ಯ ಎಸಗುತ್ತಿದೆ ಎಂದಿದ್ದಾರೆ.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…