ಭೀಕರ ಭೂಕಂಪದಿಂದ ಕಂಗೆಟ್ಟು ಹೋಗಿರೋ ಟರ್ಕಿಗೆ ಭಾರತ ಅಪಾರ ಸಹಾಯ ಹಸ್ತ ಚಾಚಿರುವುದು ಎಲ್ಲರಿಗೂ ತಿಳಿದಿರುವ ವಿಷಯವೇ. ಆಪರೇಷನ್ ದೋಸ್ತಿ ಹೆಸರಿನಲ್ಲಿ ಭಾರತದ ಸೇನೆ ಟರ್ಕಿಗೆ ತೆರಳಿ ಅಲ್ಲಿರುವ ಜನರ ಜೀವವನ್ನು ಕಾಪಾಡಿದೆ. ಮಾತ್ರವಲ್ಲದೇ ಎನ್ಡಿಆರ್ಎಫ್ ಯೋಧರನ್ನು ಕಳುಹಿಸಿದೆ. ಅಗತ್ಯ ಉಪಕರಣಗಳು ಮತ್ತು ಅಗತ್ಯ ವಸ್ತುಗಳ ಜೊತೆಗೆ ತರಬೇತಿ ಪಡೆದ ಶ್ವಾನ ತಂಡವನ್ನು ಕಳುಹಿಸಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಇಷ್ಟೆಲ್ಲಾ ಮಾಡಿದ ಮೇಲೂ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್(ಒಐಸಿ) ನಲ್ಲಿ, ಟರ್ಕಿಯು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರೋಧ ನಿಂತಿದೆ.
ಭಾರತದಿಂದ ಭಾರಿ ನೆರವು ಪಡೆದ ವಾರದ ನಂತರದಲ್ಲಿಯೇ ಟರ್ಕಿ ಭಾರತದ ವಿರುದ್ಧ ಹೇಳಿಕೆ ನೀಡಿದೆ. ಜಿನೀವಾದಲ್ಲಿ ಆರ್ಗನೈಸೇಶನ್ ಆಫ್ ಇಸ್ಲಾಮಿಕ್ ಕೋಆಪರೇಷನ್ನಲ್ಲಿ ಟರ್ಕಿಯು, ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಪ್ರಸ್ತಾಪಿಸಿದೆ. ಇದನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರರು ಖಂಡಿಸಿದ್ದಾರೆ. ಒಐಸಿ ಈಗಾಗಲೇ ಈ ವಿಷಯದ ಕುರಿತು ಚರ್ಚಿಸಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ಮೂಲಕ ಕೋಮುವಾದ, ಪಕ್ಷಪಾತದಂಥ ಕಾರ್ಯ ಎಸಗುತ್ತಿದೆ ಎಂದಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…
ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…
ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…
ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…