Latest

ತುರುವೇಕೆರೆ ಎಸ್‌ಐ ಅಮಾನತು: ಆರೋಪಿಯ ಮೊಬೈಲ್ ದುರುಪಯೋಗದ ಆರೋಪ

ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಂಗಪ್ಪ ಮೇಟಿ ವಿರುದ್ಧ ಗಂಭೀರ ಸೇವಾ ಲೋಪದ ಆರೋಪ ಎದುರಾಗಿದೆ. ಪ್ರಕರಣದ ತನಿಖೆ ಬಳಿಕ ಜಿಲ್ಲೆ ಎಸ್‌ಪಿ ಅಶೋಕ್ ಕೆ.ವಿ. ಅವರು ಮೇಟಿಯವರನ್ನು ಅಮಾನತುಗೊಳಿಸಿದ್ದಾರೆ.

ಆರೋಪಗಳ ಪ್ರಕಾರ, ಒಂದು ಕ್ರಿಮಿನಲ್ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯ ಮೊಬೈಲ್‌ ಅನ್ನು ವಶಕ್ಕೆ ಪಡೆದಿದ್ದ ಎಸ್‌ಐ ಸಂಗಪ್ಪ ಮೇಟಿ, ಆ ಫೋನ್‌ನ ಪಾಸ್‌ವರ್ಡ್‌ ಹಾಗೂ ಫೋನ್‌ಪೇ ಖಾತೆಯ ಮಾಹಿತಿಯನ್ನು ಪಡೆದು, ಅದರ ಮೂಲಕ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಆರೋಪಿಯ ಖಾತೆಯಿಂದ ಸುಮಾರು ರೂ. 95,000 ಹಣವನ್ನು ಫೋನ್‌ಪೇ ಬಳಸಿ ತಮ್ಮ ಸ್ವಂತ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಘಟನೆಯ ಇನ್ನೊಂದು ತೀವ್ರ ಸಂಗತಿ ಅಂದರೆ, ಆರೋಪಿಯನ್ನು ಜೈಲಿಗೆ ಕಳುಹಿಸಿದ ನಂತರವೂ ಅವರ ಮೊಬೈಲ್ ಅನ್ನು ಬಳಸಿ ಹಣ ವರ್ಗಾವಣೆ ನಡೆಸಲಾಗಿದೆ ಎನ್ನಲಾಗಿದೆ. ಆರೋಪದ ಕುರಿತು ಪ್ರಾಥಮಿಕ ತನಿಖೆ ನಡೆಸಿದ ಜಿಲ್ಲಾ ಎಸ್‌ಪಿ, ಆರೋಪಗಳು ವಿಶ್ವಾಸಾರ್ಹವಾಗಿವೆ ಎಂದು ನಂಬಿ, ಸಬ್ ಇನ್ಸ್‌ಪೆಕ್ಟರ್‌ ಮೇಟಿಯವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಬೆಳವಣಿಗೆ ತುಮಕೂರು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ನಂಬಿಕೆಯ ಕೊರತೆಯನ್ನು ಉಂಟುಮಾಡಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago