Latest

ಗಾಂಜಾ ಮಾರಾಟ ಪ್ರಕರಣದ ಇಬ್ಬರು ಆರೋಪಿಗಳು ಸೆರೆ, ಮಾಲು ವಶ

ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿ ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟ‌ರ್ ಆರ್. ದಯಾನಂದ್ ಮತ್ತು ಸಬ್‌ ಇನ್ಸ್‌ಪೆಕ್ಟರ್ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಭುವನಹಳ್ಳಿ ಗ್ರಾಮದ ವಾಸಿ ನಾಗರಾಜ್ ಮತ್ತು ವೆಂಕಟಾಪುರ ಗ್ರಾಮದ ವಾಸಿ ರಾಮಪ್ಪ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ರೂ. 80,000/- ಮೌಲ್ಯದ 1ಕೆ.ಜಿ. 10ಗ್ರಾಂ ಗಾಂಜಾ ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡಿದ್ದಾರೆ.

ಡಿ.ವೈ.ಎಸ್‌.ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗಾಂಜ ವಶಪಡಿಸಿಕೊಳ್ಳುವಲ್ಲಿ ಪಿ.ಐ ಆ‌ರ್.ದಯಾನಂದ್, ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳಾದ ಗಜೇಂದ್ರ, ಮಂಜುನಾಥ್, ವಿಜಯ್‌ ಕುಮಾ‌ರ್, ಸಂತೋಷ್ ಸಿದ್ದಾಪುರ ಮತ್ತು ಅಸ್ಲಂ, ಮತ್ತು ಜೀಪ್ ಚಾಲಕರಾದ ಪ್ರದೀಪ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಶ್ಲಾಘಿಸಿದ್ದಾರೆ.

ವರದಿ- ರೋಷನ್ ಜಮೀರ್

ಭ್ರಷ್ಟರ ಬೇಟೆ

Recent Posts

ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ಗಲಾಟೆ – ಕಾಂಗ್ರೆಸ್ ಮುಖಂಡ ಧನಂಜಯ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು ನಗರದ ವಿದ್ಯಾರಣ್ಯಪುರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಧನಂಜಯ್ ಸೇರಿದಂತೆ ಕೆಲವರ ವಿರುದ್ಧ…

5 hours ago

ಮಡಿಕೇರಿ ನಗರದಲ್ಲಿ ಆರ್ಥಿಕ ಸಂಕಷ್ಟದಿಂದ ವ್ಯಕ್ತಿಯೊಬ್ಬರ ಆತ್ಮಹತ್ಯೆ

ಮಡಿಕೇರಿ: ಆರ್ಥಿಕ ಬಿಕ್ಕಟ್ಟಿನಿಂದ ನಲುಗಿದ ವ್ಯಕ್ತಿಯೊಬ್ಬರು ಗುಂಡು ಹೊಡೆದು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಘಟನೆ ಮಡಿಕೇರಿ ಕೋಟೆ…

5 hours ago

“ಪತ್ನಿಯ ಕಿರುಕುಳಕ್ಕೆ ಬೇಸತ್ತು ಯುವಕ ಆತ್ಮಹತ್ಯೆ – ಡೆತ್ ನೋಟ್‌ನಲ್ಲಿ ಸತ್ಯ ಬಹಿರಂಗ

ಬೆಳಗಾವಿ: ಪತ್ನಿಯ ನಿರಂತರ ಕಿರುಕುಳದಿಂದ ಬೇಸತ್ತ 33 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಅನಗೋಳದ ದುರ್ಗಾ…

6 hours ago

ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಪತ್ತೆ: ವಾರ್ಡನ್ ಕಿರುಕುಳಕ್ಕೆ ತೀವ್ರ ಆರೋಪ”

ಚಿಕ್ಕಬಳ್ಳಾಪುರ, ಮೇ 30: ತಿಪ್ಪೇನಹಳ್ಳಿಯ ಸಮೀಪದಲ್ಲಿರುವ ಮಕ್ಕಳ ಆಸರೆ ಬಾಲಮಂದಿರದಿಂದ ನಾಪತ್ತೆಯಾಗಿದ್ದ ಐದು ಬಾಲಕಿಯರು ಇದೀಗ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ವಾರ್ಡನ್…

6 hours ago

ಐಪಿಎಲ್ ಟಿಕೆಟ್ ಕಳ್ಳ ವಹಿವಾಟು – ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಅಮಾನತು

ಬೆಂಗಳೂರು ನಗರದಲ್ಲಿ ಐಪಿಎಲ್ ಪಂದ್ಯಕ್ಕೆ ಸಂಬಂಧಿಸಿದ ಟಿಕೆಟ್‌ಗಳ ಅಕ್ರಮ ಮಾರಾಟ ಪ್ರಕರಣಕ್ಕೆ ತೊಡಗಿರುವ ಆರೋಪದ ಮೇಲೆ ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳನ್ನು…

7 hours ago

ವಿಜಿಲೆನ್ಸ್ ದಾಳಿಯಿಂದ ಗಾಬರಿಗೊಂಡ ಎಂಜಿನಿಯರ್: 500 ರೂ. ಬಂಡಲ್​ಗಳನ್ನು ಕಿಟಕಿಯಿಂದ ಹೊರ ಎಸೆದ ಘಟನೆ

ಭುವನೇಶ್ವರ: ಒಡಿಶಾದಲ್ಲಿ ವಿಜಿಲೆನ್ಸ್ (ವಿಚಕ್ಷಣ) ಅಧಿಕಾರಿಗಳ ದಾಳಿಯಿಂದ ಭಯಭೀತರಾದ ಸರ್ಕಾರಿ ಎಂಜಿನಿಯರ್ ಒಬ್ಬರು ತಮ್ಮ ಮನೆಯಿಂದ ನಗದು ಬಂಡಲ್‌ಗಳನ್ನು ಕಿಟಕಿ…

9 hours ago