ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿ ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರ್. ದಯಾನಂದ್ ಮತ್ತು ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಭುವನಹಳ್ಳಿ ಗ್ರಾಮದ ವಾಸಿ ನಾಗರಾಜ್ ಮತ್ತು ವೆಂಕಟಾಪುರ ಗ್ರಾಮದ ವಾಸಿ ರಾಮಪ್ಪ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ರೂ. 80,000/- ಮೌಲ್ಯದ 1ಕೆ.ಜಿ. 10ಗ್ರಾಂ ಗಾಂಜಾ ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್.ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗಾಂಜ ವಶಪಡಿಸಿಕೊಳ್ಳುವಲ್ಲಿ ಪಿ.ಐ ಆರ್.ದಯಾನಂದ್, ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳಾದ ಗಜೇಂದ್ರ, ಮಂಜುನಾಥ್, ವಿಜಯ್ ಕುಮಾರ್, ಸಂತೋಷ್ ಸಿದ್ದಾಪುರ ಮತ್ತು ಅಸ್ಲಂ, ಮತ್ತು ಜೀಪ್ ಚಾಲಕರಾದ ಪ್ರದೀಪ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಶ್ಲಾಘಿಸಿದ್ದಾರೆ.
ವರದಿ- ರೋಷನ್ ಜಮೀರ್
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…