ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿ ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆರ್. ದಯಾನಂದ್ ಮತ್ತು ಸಬ್ ಇನ್ಸ್ಪೆಕ್ಟರ್ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಭುವನಹಳ್ಳಿ ಗ್ರಾಮದ ವಾಸಿ ನಾಗರಾಜ್ ಮತ್ತು ವೆಂಕಟಾಪುರ ಗ್ರಾಮದ ವಾಸಿ ರಾಮಪ್ಪ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ರೂ. 80,000/- ಮೌಲ್ಯದ 1ಕೆ.ಜಿ. 10ಗ್ರಾಂ ಗಾಂಜಾ ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್.ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗಾಂಜ ವಶಪಡಿಸಿಕೊಳ್ಳುವಲ್ಲಿ ಪಿ.ಐ ಆರ್.ದಯಾನಂದ್, ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳಾದ ಗಜೇಂದ್ರ, ಮಂಜುನಾಥ್, ವಿಜಯ್ ಕುಮಾರ್, ಸಂತೋಷ್ ಸಿದ್ದಾಪುರ ಮತ್ತು ಅಸ್ಲಂ, ಮತ್ತು ಜೀಪ್ ಚಾಲಕರಾದ ಪ್ರದೀಪ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಶ್ಲಾಘಿಸಿದ್ದಾರೆ.
ವರದಿ- ರೋಷನ್ ಜಮೀರ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…