Latest

ಗಾಂಜಾ ಮಾರಾಟ ಪ್ರಕರಣದ ಇಬ್ಬರು ಆರೋಪಿಗಳು ಸೆರೆ, ಮಾಲು ವಶ

ಬಂಗಾರಪೇಟೆ : ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ರೂ. 80,000/- ಮೌಲ್ಯದ 1ಕೆ.ಜಿ 10ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಗಾರಪೇಟೆ ಪೊಲೀಸ್ ಠಾಣೆ ಸರಹದ್ದು, ಹುಣಸನಹಳ್ಳಿ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದಂತಹ ಖಚಿತ ಮಾಹಿತಿ ಆಧರಿಸಿ, ಬಂಗಾರಪೇಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟ‌ರ್ ಆರ್. ದಯಾನಂದ್ ಮತ್ತು ಸಬ್‌ ಇನ್ಸ್‌ಪೆಕ್ಟರ್ ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳು ಕೂಡಲೆ ದಾಳಿ ನಡೆಸಿ, ಭುವನಹಳ್ಳಿ ಗ್ರಾಮದ ವಾಸಿ ನಾಗರಾಜ್ ಮತ್ತು ವೆಂಕಟಾಪುರ ಗ್ರಾಮದ ವಾಸಿ ರಾಮಪ್ಪ ಎಂಬುವರನ್ನು ಬಂಧಿಸಿ, ಅವರಿಂದ ಸುಮಾರು ರೂ. 80,000/- ಮೌಲ್ಯದ 1ಕೆ.ಜಿ. 10ಗ್ರಾಂ ಗಾಂಜಾ ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಂಡಿದ್ದಾರೆ.

ಡಿ.ವೈ.ಎಸ್‌.ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಆರೋಪಿಗಳನ್ನು ಗಾಂಜ ವಶಪಡಿಸಿಕೊಳ್ಳುವಲ್ಲಿ ಪಿ.ಐ ಆ‌ರ್.ದಯಾನಂದ್, ಪ್ರಕಾಶ್ ನರಸಿಂಗ್ ಹಾಗೂ ಸಿಬ್ಬಂದಿಗಳಾದ ಗಜೇಂದ್ರ, ಮಂಜುನಾಥ್, ವಿಜಯ್‌ ಕುಮಾ‌ರ್, ಸಂತೋಷ್ ಸಿದ್ದಾಪುರ ಮತ್ತು ಅಸ್ಲಂ, ಮತ್ತು ಜೀಪ್ ಚಾಲಕರಾದ ಪ್ರದೀಪ್ ರವರುಗಳನ್ನೊಳಗೊಂಡ ತಂಡವು ಯಶಸ್ವಿಯಾಗಿದ್ದು, ತಂಡವನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಶ್ಲಾಘಿಸಿದ್ದಾರೆ.

ವರದಿ- ರೋಷನ್ ಜಮೀರ್

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago