ಬಂಗಾರಪೇಟೆ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದೂರುದಾರರಾದ ಬಂಗಾರಪೇಟೆ ವಾಸಿ ಸುಕನ್ಯಾ ಮತ್ತು ಬೊಪ್ಪನಹಳ್ಳಿ ವಾಸಿ ಬೀರಪ್ಪ ಎಂಬುವರು ಬಂಗಾರಪೇಟೆಯ ಕೆನರಾ ಬ್ಯಾಂಕ್ನಲ್ಲಿ ಚಿನ್ನದ ಆಭರಣಗಳನ್ನು ಅಡವಿಡಲು ಬಂದು ಡಿ.ಡಿ ಫಾರ್ಮ್ ಬರೆಸುತ್ತಿರುವಾಗ ಕಳ್ಳರು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೇ25 ರಂದು ಕಳ್ಳತನ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಡಿವೈಎಸ್ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪಿ.ಐ ಆರ್.ದಯಾನಂದ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಪ್ರಕಾಶ್ ನರಸಿಂಗ್ ಮತ್ತು ಅವರ ತಂಡದವರು ಬಂಗಾರಪೇಟೆ ವಾಸಿಗಳಾದ ರಾಣಿ ಯಮ್ಮ ಮತ್ತು ಷೇಕ್ ಶಬ್ರಿನ್ ಎಂಬುವರನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್ಪಿ ಎಸ್.ಪಾಂಡುರಂಗ, ಬಂಗಾರಪೇಟೆ ಪಿ.ಐ ಆರ್.ದಯಾನಂದ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿ.ಎಸ್.ಐ ಪ್ರಕಾಶ್ ನರಸಿಂಗ್, ಸಿಬ್ಬಂದಿಗಳಾದ ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್ ಮತ್ತು ಮುನೇಂದ್ರ ರವರ ಉತ್ತಮ ಕೆಲಸವನ್ನು ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ರವರು ಶ್ಲಾಘಿಸಿದ್ದಾರೆ.
ವರದಿ: ರೋಶನ್ ಜಮೀರ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…