ಬಂಗಾರಪೇಟೆ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದೂರುದಾರರಾದ ಬಂಗಾರಪೇಟೆ ವಾಸಿ ಸುಕನ್ಯಾ ಮತ್ತು ಬೊಪ್ಪನಹಳ್ಳಿ ವಾಸಿ ಬೀರಪ್ಪ ಎಂಬುವರು ಬಂಗಾರಪೇಟೆಯ ಕೆನರಾ ಬ್ಯಾಂಕ್ನಲ್ಲಿ ಚಿನ್ನದ ಆಭರಣಗಳನ್ನು ಅಡವಿಡಲು ಬಂದು ಡಿ.ಡಿ ಫಾರ್ಮ್ ಬರೆಸುತ್ತಿರುವಾಗ ಕಳ್ಳರು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೇ25 ರಂದು ಕಳ್ಳತನ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಡಿವೈಎಸ್ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪಿ.ಐ ಆರ್.ದಯಾನಂದ್ ರವರ ನೇತೃತ್ವದಲ್ಲಿ ಪಿ.ಎಸ್.ಐ ಪ್ರಕಾಶ್ ನರಸಿಂಗ್ ಮತ್ತು ಅವರ ತಂಡದವರು ಬಂಗಾರಪೇಟೆ ವಾಸಿಗಳಾದ ರಾಣಿ ಯಮ್ಮ ಮತ್ತು ಷೇಕ್ ಶಬ್ರಿನ್ ಎಂಬುವರನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಡಿ.ವೈ.ಎಸ್ಪಿ ಎಸ್.ಪಾಂಡುರಂಗ, ಬಂಗಾರಪೇಟೆ ಪಿ.ಐ ಆರ್.ದಯಾನಂದ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿ.ಎಸ್.ಐ ಪ್ರಕಾಶ್ ನರಸಿಂಗ್, ಸಿಬ್ಬಂದಿಗಳಾದ ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್ ಮತ್ತು ಮುನೇಂದ್ರ ರವರ ಉತ್ತಮ ಕೆಲಸವನ್ನು ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ರವರು ಶ್ಲಾಘಿಸಿದ್ದಾರೆ.
ವರದಿ: ರೋಶನ್ ಜಮೀರ್
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…