Latest

ಬಂಗಾರಪೇಟೆಯಲ್ಲಿ ಚಿನ್ನದ ಕಳ್ಳತನ ಪ್ರಕರಣದಲ್ಲಿ ಇಬ್ಬರು ಬಂಧನೆ: ₹2.5 ಲಕ್ಷ ಮೌಲ್ಯದ ಚಿನ್ನದ ಆಭರಣಗಳು ವಶ

ಬಂಗಾರಪೇಟೆ : ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಚಿನ್ನದ ಆಭರಣಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ದೂರುದಾರರಾದ ಬಂಗಾರಪೇಟೆ ವಾಸಿ ಸುಕನ್ಯಾ ಮತ್ತು ಬೊಪ್ಪನಹಳ್ಳಿ ವಾಸಿ ಬೀರಪ್ಪ ಎಂಬುವರು ಬಂಗಾರಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಚಿನ್ನದ ಆಭರಣಗಳನ್ನು ಅಡವಿಡಲು ಬಂದು ಡಿ.ಡಿ ಫಾರ್ಮ್ ಬರೆಸುತ್ತಿರುವಾಗ ಕಳ್ಳರು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿರುವ ಬಗ್ಗೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಮೇ25 ರಂದು ಕಳ್ಳತನ ಪ್ರಕರಣ ದಾಖಲಿಸಿ ತನಿಖೆ ನಡೆಸಿ ಈ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಮಾಡಲು ಡಿವೈಎಸ್ಪಿ ಎಸ್.ಪಾಂಡುರಂಗ ರವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪಿ.ಐ ಆರ್.ದಯಾನಂದ್ ರವರ ನೇತೃತ್ವದಲ್ಲಿ ಪಿ.ಎಸ್‌.ಐ ಪ್ರಕಾಶ್ ನರಸಿಂಗ್ ಮತ್ತು ಅವರ ತಂಡದವರು ಬಂಗಾರಪೇಟೆ ವಾಸಿಗಳಾದ ರಾಣಿ ಯಮ್ಮ ಮತ್ತು ಷೇಕ್ ಶಬ್ರಿನ್ ಎಂಬುವರನ್ನು ಬಂಧಿಸಿ, ಆರೋಪಿಗಳಿಂದ ಸುಮಾರು ರೂ. 2,50,000/- ಬೆಲೆ ಬಾಳುವ 29 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಡಿ.ವೈ.ಎಸ್ಪಿ ಎಸ್.ಪಾಂಡುರಂಗ, ಬಂಗಾರಪೇಟೆ ಪಿ.ಐ ಆರ್.ದಯಾನಂದ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬಂಗಾರಪೇಟೆ ಪಿ.ಎಸ್‌.ಐ ಪ್ರಕಾಶ್ ನರಸಿಂಗ್, ಸಿಬ್ಬಂದಿಗಳಾದ ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್ ಮತ್ತು ಮುನೇಂದ್ರ ರವರ ಉತ್ತಮ ಕೆಲಸವನ್ನು ಕೆ.ಜಿ.ಎಫ್. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ರವರು ಶ್ಲಾಘಿಸಿದ್ದಾರೆ.

ವರದಿ: ರೋಶನ್ ಜಮೀರ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago