ಮಂಡ್ಯ: ಸರ್ಕಾರಿ ಹುದ್ದೆ ನೀಡುವುದಾಗಿ ಭರವಸೆ ನೀಡಿದ ನಟೆಯಲ್ಲಿ ಅಮಾಯಕ ನಿರುದ್ಯೋಗಿಗಳನ್ನು ಲಕ್ಷಾಂತರ ರೂಪಾಯಿಗೆ ವಂಚಿಸಿದ ಪ್ರಕರಣ ಸಂಬಂಧ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಲಾಗಿದೆ.
ಅಮಾನತುಗೊಂಡವರು ಮಂಡ್ಯ ಗ್ರಾಮಾಂತರ ಠಾಣೆಯ ಕಾನ್ಸ್ಟೆಬಲ್ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಕಾನ್ಸ್ಟೆಬಲ್ ಲೋಕೇಶ್ ಎಂದು ಗುರುತಿಸಲಾಗಿದೆ. ಈ ಇಬ್ಬರು, ಈಗಾಗಲೇ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ವೆಂಕಟೇಶ್ ಎಂಬಾತನೊಂದಿಗೆ ಸಂಪರ್ಕದಲ್ಲಿದ್ದ ಆರೋಪದಲ್ಲಿ ಸಿಕ್ಕಿಬಿದ್ದಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಉದ್ಯೋಗದ ಆಸೆ ಹುಟ್ಟುಹಾಕಿ ಯುವಕರಿಂದ ಹಣ ಪಡೆದು ವಂಚನೆ ನಡೆಸಿದ ವೆಂಕಟೇಶಗೆ ಈ ಇಬ್ಬರು ಕಾನ್ಸ್ಟೆಬಲ್ಗಳು ನೆರವಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲೆದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಚುರುಕುಗೊಂಡಿರುವ ಕೋಟ್ಯಂತರ ರೂಪಾಯಿಯ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈಗಾಗಲೇ ಕೆಲವು ಶಂಕಿತರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಯುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…