Crime

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ ಕೊನೆಯಲ್ಲಿ 14 ಮತ್ತು 15 ವರ್ಷದ ಇಬ್ಬರು ಹೆಣ್ಣು ಮಕ್ಕಳು ಕೊಲೆಯಾಗಿದ್ದಾರೆ. ನಾನು ಮದುವೆಯಾಗಿರುವ ಹೆಂಡತಿ ನನಗೆ ಬೇಕು ಆದರೆ ಅವಳ ಮೊದಲನೇ ಗಂಡನಿಗೆ ಜನಿಸಿದ ಇಬ್ಬರು ಹೆಣ್ಣು ಮಕ್ಕಳ ಜವಾಬ್ದಾರಿ ನನಗೆ ಬೇಕಾಗಿಲ್ಲ ಎಂಬ ಕಾರಣಕ್ಕೆ ಮಲ ತಂದೆಯೇ ತನ್ನ ಹೆಂಡತಿಯ ಎರಡು ಹೆಣ್ಣು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ದಾಸರಹಳ್ಳಿಯಲ್ಲಿ ನಿನ್ನೆ ನಡೆದಿದೆ.
ಗಂಡನಿಂದ ವಿಚ್ಛೇದನ ಪಡೆದು ವಾಸವಾಗಿದ್ದ ಅನಿತಾ ಎಂಬ ಮಹಿಳೆಯನ್ನು 9 ವರ್ಷಗಳ ಹಿಂದೆ ಉತ್ತರ ಭಾರತ ಮೂಲದ ಸುಮಿತ್ ಎಂಬ ವ್ಯಕ್ತಿ ಮದುವೆ ಮಾಡಿಕೊಂಡಿದ್ದಾನೆ. ನಾನು ನಿನ್ನನ್ನು ಮದುವೆಯಾಗಿ ಗಂಡನಾಗಿರುವುದಲ್ಲದೆ ನಿನ್ನ ಮಕ್ಕಳಿಗೆ ಅಪ್ಪನಾಗಿ ಜವಾಬ್ದಾರಿ ಒರುತ್ತೇನೆ ಎಂದು ಮದುವೆ ಮಾಡಿಕೊಂಡಿದ್ದಾನೆ ಸುಮಾರು 9 ವರ್ಷಗಳ ಕಾಲ ಹೆಂಡತಿ ಮಕ್ಕಳೊಂದಿಗೆ ಚೆನ್ನಾಗಿ ಜೀವನ ಸಾಗಿಸುತ್ತಿದ ಗಂಡ ಸುಮಿತ್ ಈಗ ಮಕ್ಕಳು ಹರಿಹರೆಯದ ವಯಸ್ಸಿಗೆ ಬಂದಾಗ ಅವರನ್ನು ಕೊಲೆ ಮಾಡಿ ಸಿಕೊಂಡಿದ್ದಾನೆ.
ಉತ್ತರ ಭಾರತ ಮೂಲದ ಕುಟುಂಬ ದಾಸರಹಳ್ಳಿಯ ಕಾವೇರಿ ಬಡಾವಣೆಯಲ್ಲಿ ವಾಸವಿದ್ದರು. ಸುಮಾರು 14-15 ವರ್ಷಗಳ ಹೆಣ್ಣು ಮಕ್ಕಳನ್ನು ಮಲ ತಂದೆಯ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ ಈ ಕೊಲೆಯಲ್ಲಿ ಮೃತರನ್ನು 14 ವರ್ಷದ ಸೋನಿಯಾ ಹಾಗೂ 15 ವರ್ಷದ ಸೃಷ್ಟಿ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಅಕ್ಕತಂಗಿ ಹಾಗೂ ಅಪ್ರಾಪ್ತ ಬಾಲಕಿಯರಾಗಿದ್ದಾರೆ. ಕೊಲೆಯಾದ ಘಟನೆಗೆ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಸಜಿತ್ ಹಾಗೂ ಅಮೃತ ಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾಸರಹಳ್ಳಿಯ ಕಾವೇರಿ ಬಡಾವಣೆಯ ಮನೆಯೋಂದರ ಎರಡನೇ ಮಹಡಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ಜನ ವಾಸವಾಗಿದ್ದರು ಇನ್ನು ಸಮಿತ್ ಜಪ್ಟೋದಲ್ಲಿ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಶನಿವಾರ ಮಧ್ಯಾಹ್ನ ಹೆಂಡತಿ ಗಾರ್ಮೆಂಟ್ ನಲ್ಲಿ ಕೆಲಸಕ್ಕೆ ಹೋದಾಗ ಸುಮಿತ್ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಇನ್ನು ಈಗ ಘಟನೆಯ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿ ಸಜಿತ್ ಅವರು ದಾಸರಹಳ್ಳಿಯ ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿರುವ ಘಟನೆ ಮಧ್ಯಾಹ್ನ 3:30ರಲ್ಲಿ ನಡೆದಿದೆ ಈ ಬಗ್ಗೆ ಮಕ್ಕಳ ತಾಯಿ ದೂರು ನೀಡಿದ್ದಾರೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಆರೋಪಿಯನ್ನ ಬಂಧನ ಮಾಡಲು ತಂಡಗಳನ್ನು ರಚಿಸಲಾಗಿದೆ ಮಕ್ಕಳನ್ನು ಕೊಲೆ ಮಾಡಿದ ಬಳಿಕ ಮಲ ತಂದೆ ಸುಮಿತ್ ನಾಪತ್ತೆಯಾಗಿದ್ದು ಅವರ ಬಂಧನಕ್ಕೂ ಬಲೆ ಬೀಸಲಾಗಿದೆ ಎಂದಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago