ಗೌರಿಬಿದನೂರು : ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಭೀಕರ ಅಪಘಾತ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ತುಮಕೂರು ರಸ್ತೆಯಲ್ಲಿರುವ
ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಶುಕ್ರವಾರ ರಾತ್ರಿ 9 ಘಂಟೆ ಸಮಯದಲ್ಲಿ
ತುಮಕೂರು ಕಡೆಯಿಂದ ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಚಾಲಕ, ನಗರದ ಕಡೆಯಿಂದ ಬರುತ್ತಿದ್ದ, 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನಹಳ್ಳಿ ಗ್ರಾಮದ ನಂಜಪ್ಪ (60)
ಮತ್ತು ಕೊಲ್ಕತ್ತಾ ಮೂಲದ ಸೌರವ್ (24) ಸ್ಥಳದಲ್ಲೇ ಮೃತ ಪಟ್ಟಿದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು,
ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವಾಹನ ಚಾಲಕ ಕಾರನ್ನು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ, ಪೊಲೀಸರು ತನಿಖೆ ಕೈ ಗೊಂಡಿದ್ದಾರೆ. ವರದಿ: ಅವಿನಾಶ್

Related News

error: Content is protected !!