ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡು ಹಂದಿ ಬೇಟೆ ನಡೆಸಿದ ಆರೋಪದ ಮೇಲೆ ಇಬ್ಬರು ಮಾವುತರನ್ನು ಅಮಾನತುಗೊಳಿಸುವ ಪ್ರಕ್ರಿಯೆ ನಡೆದಿದೆ. ಹುಣಸೂರು ವಲಯದ ದೊಡ್ಡ ಹರವೇ ಆನೆ ಶಿಬಿರದಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾವುತರು ಹಚ್.ಎನ್. ಮಂಜು ಮತ್ತು ಜೆ.ಡಿ.ಡಿ. ಮಂಜು ಅವರು ಅಮಾನತುಗೊಂಡವರು.
ಈ ಕುರಿತು ಹೊಳೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ.ಎ. ಸೀಮಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮಾವುತರು ಶಿಬಿರದ ವಸತಿಗೃಹದಲ್ಲಿ ಬಂದೂಕು ಇಟ್ಟುಕೊಂಡು, ವನ್ಯಜೀವಿಗಳನ್ನು ಗುರಿಯಾಗಿಸಿಕೊಂಡು ಬೇಟೆ ನಡೆಸುತ್ತಿದ್ದರೆಂಬ ಮಾಹಿತಿ ಮೇರೆಗೆ ವನ್ಯಜೀವಿ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡರು. ಪರಿಶೀಲನೆ ವೇಳೆ ಶಿಬಿರದಲ್ಲಿಯೇ ಬಂದೂಕು ಪತ್ತೆಯಾಗಿದ್ದು, ಅದರ ನಂತರ ಇಬ್ಬರ ಮೇಲೂ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ವನ್ಯಜೀವಿಗಳ ರಕ್ಷಣೆಗೆ ನಿಯೋಜಿಸಲಾದ ಸಿಬ್ಬಂದಿಯೇ ಬೇಟೆಗೆ ಕೈ ಹಾಕಿದ್ದಲ್ಲಿ, ಅದು ಗಂಭೀರ ಅಪರಾಧವಾಗಿದ್ದು, ಅರಣ್ಯ ಇಲಾಖೆ ಇದನ್ನು ತೀವ್ರಗೊಳಿಸಿಕೊಂಡಿದೆ. ಮುಂದಿನ ತನಿಖೆಯಲ್ಲೂ ಇಂತಹ ಕ್ರಿಯೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಇಲಾಖೆ ನೀಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…