ಮಂಗಳೂರು, ಮೇ 7: ಕಾರು ಸಂಬಂಧಿತ ಕ್ಷುಲ್ಲಕ ತಕರಾರೊಂದು ಕೊನೆಗೆ ಹಿಂಸಾತ್ಮಕ ತಿರುವು ಪಡೆದ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ.
ಮೂಲತಃ ಪುತ್ತೂರಿನ ನಿವಾಸಿಯಾದ ಮಾರ್ಜುಕ್ ಎಂಬಾತನು ಎರಡು ತಿಂಗಳ ಹಿಂದೆ ಕ್ವಿಡ್ ಕಾರು ಖರೀದಿ ಮಾಡಿದ್ದು, ಎಲ್ಲಾ ಲೋನ್ ಹಣವನ್ನು ಸಮಯಕ್ಕೆ ಪಾವತಿಸಿದ್ದ. ಆದರೂ ಕಾರಿನ ಹಿಂದಿನ ಮಾಲಿಕ ಸದಾ ಬೇಸರ ತೋರಿಸುತ್ತಾ, ಕಾರು ಸಂಬಂಧಿತ ವಿಚಾರದಲ್ಲಿ ತಕರಾರು ಹುಟ್ಟುಹಾಕುತ್ತಿದ್ದ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ, ಮಾರ್ಜುಕ್ ವಾಸವಾಗಿರುವ ಅತ್ತಾವರದ ಪ್ಲಾಟ್ ಗೆ ನಾಲ್ವರು ದುಷ್ಕರ್ಮಿಗಳು ಆಗಮಿಸಿ, ಮಾರ್ಜುಕ್ ಮತ್ತು ಅವನ ಗೆಳೆಯ ಅನಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಬಳಿಕ ಆರೋಪಿಗಳು ಕ್ವಿಡ್ ಕಾರು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಾರ್ಜುಕ್ ಮತ್ತು ಅನಸ್ ಅವರನ್ನು ತಕ್ಷಣವೇ ನಗರದ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಬಲೆ ಬೀಸಲಾಗಿದ್ದು, ಈ ಕುರಿತಂತೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…
ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…