ಮಂಗಳೂರು, ಮೇ 7: ಕಾರು ಸಂಬಂಧಿತ ಕ್ಷುಲ್ಲಕ ತಕರಾರೊಂದು ಕೊನೆಗೆ ಹಿಂಸಾತ್ಮಕ ತಿರುವು ಪಡೆದ ಘಟನೆ ಮಂಗಳೂರಿನ ಅತ್ತಾವರದಲ್ಲಿ ನಡೆದಿದೆ.
ಮೂಲತಃ ಪುತ್ತೂರಿನ ನಿವಾಸಿಯಾದ ಮಾರ್ಜುಕ್ ಎಂಬಾತನು ಎರಡು ತಿಂಗಳ ಹಿಂದೆ ಕ್ವಿಡ್ ಕಾರು ಖರೀದಿ ಮಾಡಿದ್ದು, ಎಲ್ಲಾ ಲೋನ್ ಹಣವನ್ನು ಸಮಯಕ್ಕೆ ಪಾವತಿಸಿದ್ದ. ಆದರೂ ಕಾರಿನ ಹಿಂದಿನ ಮಾಲಿಕ ಸದಾ ಬೇಸರ ತೋರಿಸುತ್ತಾ, ಕಾರು ಸಂಬಂಧಿತ ವಿಚಾರದಲ್ಲಿ ತಕರಾರು ಹುಟ್ಟುಹಾಕುತ್ತಿದ್ದ ಎನ್ನಲಾಗಿದೆ.
ಈ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ, ಮಾರ್ಜುಕ್ ವಾಸವಾಗಿರುವ ಅತ್ತಾವರದ ಪ್ಲಾಟ್ ಗೆ ನಾಲ್ವರು ದುಷ್ಕರ್ಮಿಗಳು ಆಗಮಿಸಿ, ಮಾರ್ಜುಕ್ ಮತ್ತು ಅವನ ಗೆಳೆಯ ಅನಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಬಳಿಕ ಆರೋಪಿಗಳು ಕ್ವಿಡ್ ಕಾರು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಾರ್ಜುಕ್ ಮತ್ತು ಅನಸ್ ಅವರನ್ನು ತಕ್ಷಣವೇ ನಗರದ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಬಲೆ ಬೀಸಲಾಗಿದ್ದು, ಈ ಕುರಿತಂತೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…