Categories: CrimeLatest

ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಡಗೋಡದ ಇಬ್ಬರು ಗಡಿಪಾರು

ಮುಂಡಗೋಡ: ಅಪರಾಧ ಚಟುವಟಿಕೆಗಳಲ್ಲಿ
ಪಾಲ್ಗೊಂಡಿದ್ದ ಮುಂಡಗೋಡ ತಾಲೂಕಿನ ಇಬ್ಬರನ್ನು ಉತ್ತರ ಕನ್ನಡ ಜಿಲ್ಲಾ ಎಸ್ಪಿ ದೀಪನ್ ಎಂ ಎನ್ ಆದೇಶದ ಮೇರೆಗೆ ವಿವಿಧ ಜಿಲ್ಲೆಗಳಿಗೆ ಗಡಿಪಾರು ಮಾಡಲಾಗಿದೆ.
ಅಪರಾಧ ಹಿನ್ನೆಲೆಯನ್ನು ಬಂಡವಾಳವಾಗಿರಿಸಿಕೊಂಡು ಮುಂಡಗೋಡ ಮಾಡುವ ಮೂಲಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳನ್ನು ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನು ತಂದು ಸಾರ್ವಜನಿಕ ಶಾಂತಿ, ನೆಮ್ಮದಿ. ಸೌಹಾರ್ದತೆಗೆ, ಆಸ್ತಿಪಾಸ್ತಿ ಕಾನೂನು ಸುವ್ಯವಸ್ಥೆಗೆ ದಕ್ಕೆ ಉಂಟು ಮಾಡಿ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಅವರು ಗಡಿಪಾರಿಗೆ ವಿವರವಾದ ಸೂಕ್ತ ಪ್ರಸ್ತಾವನೆ ಅರ್ಜಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿದ್ದರು.

ಗಡಿಪಾರು ಪ್ರಸ್ತಾವನೆ ಅರ್ಜಿ ಪರಿಶೀಲಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ವಾದ ಮತ್ತು ಪ್ರತಿವಾದಗಳನ್ನು ಆಲಿಸಿ ಗಡಿಪಾರು ಮಾಡುವುದು
ಅವಶ್ಯವೆಂದು ಕಂಡುಬಂದಿದ್ದರಿಂದ ದಿನಾಂಕ:-27/06/2026 ರಂದು ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55(ಎ) (ಬಿ) ರಡಿಯಲ್ಲಿ ಮಧುಸಿಂಗ್ ತಂದೆ ಗಂಗಾರಾಮಸಿಂಗ್ ರಜಪೂತ ಈತನಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯ ಮಂಡ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ 06 ತಿಂಗಳುವರೆಗೆ ಗಡಿಪಾರು ಮಾಡಿ ಆದೇಶಿಸಿರುತ್ತಾರೆ, ಅದರಂತೆ ಅಪರಾಧ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಮತ್ತೋರ್ವ ಮಂಜುನಾಥ್ ಅರ್ಜುನ್ ನವಲೆ ಎಂಬಾತನನ್ನು ಕೋಲಾರ ಜಿಲ್ಲೆಯ ರಾಬರ್ಟ್ ಸನ್ ಪೊಲೀಸ್ ಠಾಣೆ ವ್ಯಾಪ್ತಿಗೆ 06 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ನೀಡಿರುತ್ತಾರೆ.

ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ಸಂಪೂರ್ಣವಾಗಿ ಹತ್ತಿಕ್ಕಲು ಕಟಿಬದ್ದವಾಗಿರುವ ಎಸ್ಪಿ ದೀಪನ್ ಎಂ ಎನ್ ಅವರು ಖಡಕ್ ನಿರ್ಣಯಗಳ ಮೂಲಕ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ಪ್ರಕ್ರಿಯೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

10 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

12 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago