ಸಿದ್ದಾಪುರ-ಜಲಪಾತ ವೀಕ್ಷಣೆಗೆ ತೆರಳಿದ ಇಬ್ಬರು ನೀರಿನಲ್ಲಿ ಕಾಣೆಯಾಗಿದ್ದು, ರಾತ್ರಿ ವೇಳೆ ನೀರಿನ ಆಳದಲ್ಲಿ ಇಬ್ಬರ ಶವ ಸಿಕ್ಕಿದೆ.
ಶಿರಸಿಯ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಇನ್ನೂ ನಾಲ್ಕು ಜನ ಶುಕ್ರವಾರ ಸಿದ್ದಾಪುರಕ್ಕೆ ಬಂದಿದ್ದರು. ಸಂಜೆಯವರೆಗೂ ಸುತ್ತಾಟ ನಡೆಸಿದ ಅವರು ನಿಲ್ಕುಂದ ಬಳಿಯ ವಾಟೆಹೊಳೆ ಜಲಪಾತಕ್ಕೆ ಭೇಟಿ ನೀಡಿದ್ದರು. ಅಲ್ಲಿ ಮೋಜು-ಮಸ್ತಿಯಲ್ಲಿ ತೊಡಗಿದ್ದಾಗ ಇಬ್ಬರು ನೀರುಪಾಲಾದರು.
ಜಲಪಾತದ ಬಳಿಯಿರುವ ಹೊಂಡದಲ್ಲಿ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಮುಳುಗಿರುವುದನ್ನು ಅವರ ಸ್ನೇಹಿತರು ನೋಡಿದ್ದಾರೆ. ಈ ಹಿನ್ನಲೆ ಅದೇ ಭಾಗದಲ್ಲಿ ಹುಡುಕಾಟ ನಡೆಸಲಾಯಿತು. ಮುಸ್ಸಂಜೆವರೆಗೂ ನಿರಂತರ ಶೋಧ ಕಾರ್ಯಾಚರಣೆ ನಡೆದಿದ್ದು, ನಂತರ ಕತ್ತಲು ಆವರಿಸಿರುವುದರಿಂದ ಹುಡುಕಾಟ ಕಷ್ಟವಾಯಿತು. ಅದಾಗಿಯೂ ನಿರಂತರ ಶೋಧ ನಡೆಸಿದಾಗ ಅಕ್ಷಯ ಭಟ್ಟ ಹಾಗೂ ಸುಹಾಸ ಶೆಟ್ಟಿ ಶವವಾಗಿ ಸಿಕ್ಕಿದ್ದಾರೆ.
ಡಿವೈಎಸ್ಪಿ ಕೆ ಎಲ್ ಗಣೇಶ, ಸಿದ್ದಾಪುರ ಪೊಲೀಸ್ ನಿರೀಕ್ಷಕ ಜೆಬಿ ಸೀತಾರಾಮ ಸಹ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಾರಿಕಾಂಬಾ ಲೈಫ್ಗಾರ್ಡ ತಂಡದವರು ಕಾರ್ಯಾಚರಣೆ ನಡೆಸಿದ್ದಾರೆ. ಮುಳುಗುತಜ್ಞ ಗೋಪಾಲ ಗೌಡ ರಕ್ಷಣಾ ಸಿಬ್ಬಂದಿಗೆ ಮಾರ್ಗದರ್ಶನ ನೀಡುತ್ತಿದ್ದು, ನೀರು ಪಾಲಾದವರ ಪಾಲಕರು ಹಾಗೂ ಕೆಲ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…