ಚಾಮರಾಜನಗರ ಜಿಲ್ಲೆ, ಹನೂರು: ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.
ಸೋಮವಾರ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿ, ಅರಣ್ಯದೊಳಗೆ ಗಂಡು ಹುಲಿ ಮರಿಯ ಕಳೇಬರವನ್ನು ಪತ್ತೆಹಚ್ಚಿದರು. ತಕ್ಷಣವೇ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಳಿಗ್ಗೆ, ಘಟನಾ ಸ್ಥಳದ ಸಮೀಪದಲ್ಲಿ ಕೂಂಬಿಂಗ್ ಕಾರ್ಯಾಚರಣೆ ವೇಳೆ 50 ಮೀಟರ್ ದೂರದಲ್ಲಿದ್ದ ಗುಹೆಯ ಬಳಿ ಮತ್ತೊಂದು ಹೆಣ್ಣು ಹುಲಿ ಮರಿಯ ಕಳೇಬರವೂ ಪತ್ತೆಯಾಯಿತು.
ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ, ಸುಮಾರು 15 ದಿನಗಳ ವಯಸ್ಸಿನ ಈ ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಆಹಾರ ಲಭ್ಯವಾಗದೆ ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.
ಜೂನ್ 26ರಂದು ಇದೇ ವನ್ಯಜೀವಿ ವಿಭಾಗದ ಹೂಗ್ಯಂ ವಲಯದ ಮೀಣ್ಯಂ ಬಳಿ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮರೆಯದ ಮುನ್ನ, ಇದೀಗ ಎರಡು ಹುಲಿ ಮರಿಗಳ ಸಾವಿನಿಂದ ವನ್ಯಜೀವಿ ಪ್ರೇಮಿಗಳು ಆಘಾತ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ದಿನಗಳಲ್ಲಿ ಹುಲಿಗಳ ಚಲನವಲನ ಹಾಗೂ ಅವರ ವಾಸಸ್ಥಾನಗಳ ಮೇಲೆ ಹೆಚ್ಚುವರಿ ನಿಗಾ ವಹಿಸಲು ಕ್ರಮ ಕೈಗೊಳ್ಳುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…