Latest

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ದುರ್ಮರಣ

ಚಾಮರಾಜನಗರ ಜಿಲ್ಲೆ, ಹನೂರು: ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳ ಸಾವಿನ ಪ್ರಕರಣ ಬೆಳಕಿಗೆ ಬಂದಿದೆ.

ಸೋಮವಾರ ಗಸ್ತು ನಡೆಸುತ್ತಿದ್ದ ಅರಣ್ಯ ಸಿಬ್ಬಂದಿ, ಅರಣ್ಯದೊಳಗೆ ಗಂಡು ಹುಲಿ ಮರಿಯ ಕಳೇಬರವನ್ನು ಪತ್ತೆಹಚ್ಚಿದರು. ತಕ್ಷಣವೇ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಮಂಗಳವಾರ ಬೆಳಿಗ್ಗೆ, ಘಟನಾ ಸ್ಥಳದ ಸಮೀಪದಲ್ಲಿ ಕೂಂಬಿಂಗ್ ಕಾರ್ಯಾಚರಣೆ ವೇಳೆ 50 ಮೀಟರ್ ದೂರದಲ್ಲಿದ್ದ ಗುಹೆಯ ಬಳಿ ಮತ್ತೊಂದು ಹೆಣ್ಣು ಹುಲಿ ಮರಿಯ ಕಳೇಬರವೂ ಪತ್ತೆಯಾಯಿತು.

ಪ್ರಾಥಮಿಕ ಮರಣೋತ್ತರ ಪರೀಕ್ಷಾ ವರದಿಯ ಪ್ರಕಾರ, ಸುಮಾರು 15 ದಿನಗಳ ವಯಸ್ಸಿನ ಈ ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಆಹಾರ ಲಭ್ಯವಾಗದೆ ಹಸಿವಿನಿಂದ ಮೃತಪಟ್ಟಿರುವುದು ತಿಳಿದುಬಂದಿದೆ.

ಜೂನ್ 26ರಂದು ಇದೇ ವನ್ಯಜೀವಿ ವಿಭಾಗದ ಹೂಗ್ಯಂ ವಲಯದ ಮೀಣ್ಯಂ ಬಳಿ ಐದು ಹುಲಿಗಳು ವಿಷಪ್ರಾಶನದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮರೆಯದ ಮುನ್ನ, ಇದೀಗ ಎರಡು ಹುಲಿ ಮರಿಗಳ ಸಾವಿನಿಂದ ವನ್ಯಜೀವಿ ಪ್ರೇಮಿಗಳು ಆಘಾತ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮುಂದಿನ ದಿನಗಳಲ್ಲಿ ಹುಲಿಗಳ ಚಲನವಲನ ಹಾಗೂ ಅವರ ವಾಸಸ್ಥಾನಗಳ ಮೇಲೆ ಹೆಚ್ಚುವರಿ ನಿಗಾ ವಹಿಸಲು ಕ್ರಮ ಕೈಗೊಳ್ಳುತ್ತಿದೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

1 hour ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

17 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

24 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

24 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago