Latest

ಉದಯಪುರ ಫೈಲ್ಸ್ ಚಿತ್ರ ಬಿಡುಗಡೆಗೆ ತಡೆ: ಪ್ರಧಾನಿ ಮೋದಿಗೆ ಸಹಾಯದ ಪತ್ರ ಬರೆದ ಕನ್ಹಯ್ಯಾ ಲಾಲ್ ಪತ್ನಿ.

ನವದೆಹಲಿ: 2022ರ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್‌ ಹತ್ಯೆ ಪ್ರಕರಣದ ಆಧಾರಿತವಾಗಿ ನಿರ್ಮಿತವಾಗಿರುವ ಉದಯಪುರ ಫೈಲ್ಸ್ ಚಿತ್ರದ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಈ ಹಿನ್ನೆಲೆ ಕನ್ಹಯ್ಯಾ ಲಾಲ್ ಅವರ ಪತ್ನಿ ಜಶೋದಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಚಿತ್ರ ಬಿಡುಗಡೆಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಜಶೋದಾ ಅವರು ಪತ್ರದಲ್ಲಿ, ಕೆಲವು ಮುಸ್ಲಿಂ ಸಂಘಟನೆಗಳು ಹಾಗೂ ನ್ಯಾಯಾಂಗದ ವಕೀಲರು ಈ ಸಿನಿಮಾವನ್ನು ತಡೆಯಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾರೆ. “ಈ ಸಿನಿಮಾ ನನ್ನ ಪತಿಗೆ ನ್ಯಾಯ ನೀಡುವ ಪ್ರಯತ್ನವಾಗಿದೆ. ಆದರೆ ಅದನ್ನು ತಡೆಯುವ ಮೂಲಕ ನನಗೆ ಮತ್ತೊಮ್ಮೆ ನೋವುಂಟಾಗುತ್ತಿದೆ,” ಎಂದು ಅವರು ಪತ್ರದಲ್ಲಿ ಕಣ್ಣೀರಾಗಿದ್ದಾರೆ.

ಈ ಪ್ರಕರಣದ ಹಿನ್ನೆಲೆ 2022ರಲ್ಲಿದೆ. ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ನಂತರ, ಬಿಜೆಪಿ ಅವರನ್ನು ಉಚ್ಛಾಟಿಸಿತ್ತು. ಆದರೆ ಕನ್ಹಯ್ಯಾ ಲಾಲ್ ಅವರು ನೂಪುರ್ ಶರ್ಮಾವನ್ನು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲಿಸಿದ್ದಕ್ಕೆ ಆಕ್ರೋಶಗೊಂಡ ಇಬ್ಬರು—ಮೋಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್—ಅವರು ಕನ್ಹಯ್ಯಾ ಲಾಲ್ ಅವರ ಶಿರಚ್ಛೇದನ ಮಾಡಿದ್ದರು.

ಈ ಭೀಕರ ಘಟನೆಯ ಹಿನ್ನೆಲೆಯನ್ನೇ ಆಧಾರವಿಟ್ಟುಕೊಂಡು ‘ಉದಯಪುರ ಫೈಲ್ಸ್’ ಎಂಬ ಹೆಸರಿನಲ್ಲಿ ಸಿನಿಮಾ ನಿರ್ಮಿಸಲಾಗಿದೆ. ಈ ಚಿತ್ರವು ಕೊಲೆಯ ಹಿಂದಿನ ಯಥಾರ್ಥವನ್ನು ಬಹಿರಂಗಪಡಿಸುತ್ತಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ಕೆಲವು ಧಾರ್ಮಿಕ ಸಂಘಟನೆಗಳು ಮತ್ತು ವ್ಯಕ್ತಿಗಳು ಚಿತ್ರದಲ್ಲಿ ವಿಶಿಷ್ಟ ಸಮುದಾಯವನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಕನ್ಹಯ್ಯಾ ಲಾಲ್ ಪತ್ನಿಯ ಮನವಿ ಪ್ರಧಾನಮಂತ್ರಿ ಗಮನ ಸೆಳೆದಿದ್ದು, ಚಿತ್ರ ಬಿಡುಗಡೆಗೆ ಸರ್ಕಾರ ಬೆಂಬಲ ನೀಡುತ್ತದೆಯೇ ಎಂಬ ನಿರೀಕ್ಷೆ ಮುಂದಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago