Latest

ಉದಯಪುರ ಫೈಲ್ಸ್ ಚಿತ್ರ ಬಿಡುಗಡೆಗೆ ತಡೆ: ಪ್ರಧಾನಿ ಮೋದಿಗೆ ಸಹಾಯದ ಪತ್ರ ಬರೆದ ಕನ್ಹಯ್ಯಾ ಲಾಲ್ ಪತ್ನಿ.

ನವದೆಹಲಿ: 2022ರ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್‌ ಹತ್ಯೆ ಪ್ರಕರಣದ ಆಧಾರಿತವಾಗಿ ನಿರ್ಮಿತವಾಗಿರುವ ಉದಯಪುರ ಫೈಲ್ಸ್ ಚಿತ್ರದ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಈ ಹಿನ್ನೆಲೆ ಕನ್ಹಯ್ಯಾ ಲಾಲ್ ಅವರ ಪತ್ನಿ ಜಶೋದಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಚಿತ್ರ ಬಿಡುಗಡೆಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಜಶೋದಾ ಅವರು ಪತ್ರದಲ್ಲಿ, ಕೆಲವು ಮುಸ್ಲಿಂ ಸಂಘಟನೆಗಳು ಹಾಗೂ ನ್ಯಾಯಾಂಗದ ವಕೀಲರು ಈ ಸಿನಿಮಾವನ್ನು ತಡೆಯಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾರೆ. “ಈ ಸಿನಿಮಾ ನನ್ನ ಪತಿಗೆ ನ್ಯಾಯ ನೀಡುವ ಪ್ರಯತ್ನವಾಗಿದೆ. ಆದರೆ ಅದನ್ನು ತಡೆಯುವ ಮೂಲಕ ನನಗೆ ಮತ್ತೊಮ್ಮೆ ನೋವುಂಟಾಗುತ್ತಿದೆ,” ಎಂದು ಅವರು ಪತ್ರದಲ್ಲಿ ಕಣ್ಣೀರಾಗಿದ್ದಾರೆ.

ಈ ಪ್ರಕರಣದ ಹಿನ್ನೆಲೆ 2022ರಲ್ಲಿದೆ. ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ನಂತರ, ಬಿಜೆಪಿ ಅವರನ್ನು ಉಚ್ಛಾಟಿಸಿತ್ತು. ಆದರೆ ಕನ್ಹಯ್ಯಾ ಲಾಲ್ ಅವರು ನೂಪುರ್ ಶರ್ಮಾವನ್ನು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲಿಸಿದ್ದಕ್ಕೆ ಆಕ್ರೋಶಗೊಂಡ ಇಬ್ಬರು—ಮೋಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್—ಅವರು ಕನ್ಹಯ್ಯಾ ಲಾಲ್ ಅವರ ಶಿರಚ್ಛೇದನ ಮಾಡಿದ್ದರು.

ಈ ಭೀಕರ ಘಟನೆಯ ಹಿನ್ನೆಲೆಯನ್ನೇ ಆಧಾರವಿಟ್ಟುಕೊಂಡು ‘ಉದಯಪುರ ಫೈಲ್ಸ್’ ಎಂಬ ಹೆಸರಿನಲ್ಲಿ ಸಿನಿಮಾ ನಿರ್ಮಿಸಲಾಗಿದೆ. ಈ ಚಿತ್ರವು ಕೊಲೆಯ ಹಿಂದಿನ ಯಥಾರ್ಥವನ್ನು ಬಹಿರಂಗಪಡಿಸುತ್ತಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ಕೆಲವು ಧಾರ್ಮಿಕ ಸಂಘಟನೆಗಳು ಮತ್ತು ವ್ಯಕ್ತಿಗಳು ಚಿತ್ರದಲ್ಲಿ ವಿಶಿಷ್ಟ ಸಮುದಾಯವನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಕನ್ಹಯ್ಯಾ ಲಾಲ್ ಪತ್ನಿಯ ಮನವಿ ಪ್ರಧಾನಮಂತ್ರಿ ಗಮನ ಸೆಳೆದಿದ್ದು, ಚಿತ್ರ ಬಿಡುಗಡೆಗೆ ಸರ್ಕಾರ ಬೆಂಬಲ ನೀಡುತ್ತದೆಯೇ ಎಂಬ ನಿರೀಕ್ಷೆ ಮುಂದಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago