Latest

ಉದಯಪುರ ಫೈಲ್ಸ್ ಚಿತ್ರ ಬಿಡುಗಡೆಗೆ ತಡೆ: ಪ್ರಧಾನಿ ಮೋದಿಗೆ ಸಹಾಯದ ಪತ್ರ ಬರೆದ ಕನ್ಹಯ್ಯಾ ಲಾಲ್ ಪತ್ನಿ.

ನವದೆಹಲಿ: 2022ರ ಉದಯಪುರದ ದರ್ಜಿ ಕನ್ಹಯ್ಯಾ ಲಾಲ್‌ ಹತ್ಯೆ ಪ್ರಕರಣದ ಆಧಾರಿತವಾಗಿ ನಿರ್ಮಿತವಾಗಿರುವ ಉದಯಪುರ ಫೈಲ್ಸ್ ಚಿತ್ರದ ಬಿಡುಗಡೆಗೆ ದೆಹಲಿ ಹೈಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದೆ. ಈ ಹಿನ್ನೆಲೆ ಕನ್ಹಯ್ಯಾ ಲಾಲ್ ಅವರ ಪತ್ನಿ ಜಶೋದಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಚಿತ್ರ ಬಿಡುಗಡೆಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಜಶೋದಾ ಅವರು ಪತ್ರದಲ್ಲಿ, ಕೆಲವು ಮುಸ್ಲಿಂ ಸಂಘಟನೆಗಳು ಹಾಗೂ ನ್ಯಾಯಾಂಗದ ವಕೀಲರು ಈ ಸಿನಿಮಾವನ್ನು ತಡೆಯಲು ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ್ದಾರೆ. “ಈ ಸಿನಿಮಾ ನನ್ನ ಪತಿಗೆ ನ್ಯಾಯ ನೀಡುವ ಪ್ರಯತ್ನವಾಗಿದೆ. ಆದರೆ ಅದನ್ನು ತಡೆಯುವ ಮೂಲಕ ನನಗೆ ಮತ್ತೊಮ್ಮೆ ನೋವುಂಟಾಗುತ್ತಿದೆ,” ಎಂದು ಅವರು ಪತ್ರದಲ್ಲಿ ಕಣ್ಣೀರಾಗಿದ್ದಾರೆ.

ಈ ಪ್ರಕರಣದ ಹಿನ್ನೆಲೆ 2022ರಲ್ಲಿದೆ. ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ನಂತರ, ಬಿಜೆಪಿ ಅವರನ್ನು ಉಚ್ಛಾಟಿಸಿತ್ತು. ಆದರೆ ಕನ್ಹಯ್ಯಾ ಲಾಲ್ ಅವರು ನೂಪುರ್ ಶರ್ಮಾವನ್ನು ಸಾಮಾಜಿಕ ಜಾಲತಾಣದ ಮೂಲಕ ಬೆಂಬಲಿಸಿದ್ದಕ್ಕೆ ಆಕ್ರೋಶಗೊಂಡ ಇಬ್ಬರು—ಮೋಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್—ಅವರು ಕನ್ಹಯ್ಯಾ ಲಾಲ್ ಅವರ ಶಿರಚ್ಛೇದನ ಮಾಡಿದ್ದರು.

ಈ ಭೀಕರ ಘಟನೆಯ ಹಿನ್ನೆಲೆಯನ್ನೇ ಆಧಾರವಿಟ್ಟುಕೊಂಡು ‘ಉದಯಪುರ ಫೈಲ್ಸ್’ ಎಂಬ ಹೆಸರಿನಲ್ಲಿ ಸಿನಿಮಾ ನಿರ್ಮಿಸಲಾಗಿದೆ. ಈ ಚಿತ್ರವು ಕೊಲೆಯ ಹಿಂದಿನ ಯಥಾರ್ಥವನ್ನು ಬಹಿರಂಗಪಡಿಸುತ್ತಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ಕೆಲವು ಧಾರ್ಮಿಕ ಸಂಘಟನೆಗಳು ಮತ್ತು ವ್ಯಕ್ತಿಗಳು ಚಿತ್ರದಲ್ಲಿ ವಿಶಿಷ್ಟ ಸಮುದಾಯವನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಕನ್ಹಯ್ಯಾ ಲಾಲ್ ಪತ್ನಿಯ ಮನವಿ ಪ್ರಧಾನಮಂತ್ರಿ ಗಮನ ಸೆಳೆದಿದ್ದು, ಚಿತ್ರ ಬಿಡುಗಡೆಗೆ ಸರ್ಕಾರ ಬೆಂಬಲ ನೀಡುತ್ತದೆಯೇ ಎಂಬ ನಿರೀಕ್ಷೆ ಮುಂದಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago