Latest

ಉಡುಪಿ ಲೋಕಾಯುಕ್ತ ದಾಳಿ: ಲಂಚದ ವೇಳೆ ಇಬ್ಬರು ಸಹಕಾರ ಇಲಾಖೆ ಅಧಿಕಾರಿಗಳ ಬಂಧನ

ಉಡುಪಿ, ಜು.24: ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಸಿಕೊಡುವಂತೆ ಲಂಚದ ಬೇಡಿಕೆ ಇಟ್ಟ ಆರೋಪದ ಮೇಲೆ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಮತ್ತು ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಲೋಕಾಯುಕ್ತ ಪೊಲೀಸರು (ಜು.24) ರಂದು ಬಂಧಿಸಿದ್ದಾರೆ.

ಈ ಇಬ್ಬರೂ ಅಧಿಕಾರಿಗಳು, ಉಡುಪಿ ಜಿಲ್ಲೆಯ ಶಾಂತಿನಿಕೇತನ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನೆರವೇರಿಸಲು ತಲಾ ₹5,000ರಂತೆ ₹10,000 ಲಂಚವನ್ನು ಬೇಡಿದ್ದರು ಎನ್ನಲಾಗಿದೆ. ಆದರೆ, ಈ ಬೇಡಿಕೆಯನ್ನು ನಿರಾಕರಿಸಿದ ಸಂಘದ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ ಅವರು ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದರು.

ದೂರಿನ ತನಿಖೆಯ ನಂತರ, ಲೋಕಾಯುಕ್ತ ಪೊಲೀಸರು ಸೂಕ್ಷ್ಮವಾದ ಉಸ್ತುವಾರಿ ಹಾಕಿ ರೇಣುಕಾ ಅವರ ಉಡುಪಿಯಲ್ಲಿರುವ ಕಚೇರಿಗೆ ದಿಢೀರ್ ದಾಳಿ ನಡೆಸಿದರು. ಆ ವೇಳೆ ಲಂಚದ ಹಣ ಸ್ವೀಕರಿಸುತ್ತಿದ್ದ ರೇಣುಕಾವನ್ನು ಪೊಲೀಸರು ಬಂಧಿಸಿದರು. ಜಯರಾಮ್ ಅವರನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.

ಈ ಕಾರ್ಯಚರಣೆಯನ್ನು ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಡಿವೈಎಸ್‌ಪಿ ಮಂಜುನಾಥ್ ಶಂಕರಹಳ್ಳಿ ನೇತೃತ್ವದ ತಂಡ ಯಶಸ್ವಿಯಾಗಿ ನಡೆಸಿತು. ತಂಡದಲ್ಲಿ ಉಡುಪಿ ಲೋಕಾಯುಕ್ತ PSI ರಾಜೇಂದ್ರ ನಾಯಕ್ ಎಂ.ಎನ್., ಮಂಗಳೂರು PSI ಚಂದ್ರಶೇಖರ್ ಸೇರಿದಂತೆ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಸತೀಶ್ ಹಂದಾಡಿ, ಮಲ್ಲಿಕಾ, ಪುಷ್ಪಾವತಿ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಮತ್ತು ಸುಧೀರ್ ಮುಂತಾದವರು ಭಾಗವಹಿಸಿದ್ದರು.

ಲಂಚದ ಬೇಡಿಕೆ ಹಾಗೂ ಪಡೆಯುವ ಸಂದರ್ಭದಲ್ಲೇ ಬಂಧನಗೊಂಡಿರುವ ಅಧಿಕಾರಿಗಳ ವಿರುದ್ಧ ಮುಂದಿನ ಹಂತದ ಕಾನೂನು ಕ್ರಮ ಕೈಗೊಳ್ಳಲಾಗಿದೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago