Latest

ಉಮಾಪತಿ ಭಾಷಣದಲ್ಲಿ ದರ್ಶನ್ ವಿರುದ್ಧ ಮತ್ತೊಮ್ಮೆ ಕಿಡಿಕಾರಿಕೆ..

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ ಉಮಾಪತಿ ಅವರ ಮಾತುಗಳು.

‘ರಾಬರ್ಟ್’ ಸಿನಿಮಾದ ಟೈಟಲ್ ವಿವಾದದಿಂದ ಶುರುವಾದ ದರ್ಶನ್ ಮತ್ತು ಉಮಾಪತಿ ನಡುವಿನ ದ್ವೇಷ, ತಗಡು ಎಂಬ ಪದ ಬಳಕೆಯಿಂದ ಮತ್ತಷ್ಟು ಉಲ್ಬಣಗೊಂಡಿತ್ತು. ಈಗ ಉಮಾಪತಿ ಅವರು ನೀಡಿರುವ ಹೊಸ ಹೇಳಿಕೆ, ಈ ಬಾಂಬನ್ನು ಮತ್ತೊಮ್ಮೆ ಸಿಡಿಸಿರುವಂತಾಗಿದೆ.

ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮದಲ್ಲಿ ನಡೆದ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಮಾಪತಿ ಮಾತನಾಡುತ್ತಾ, “ಈ ಜಗತ್ತಿನಲ್ಲಿ ಎರಡು ರೀತಿಯ ಜನರು ಇರುತ್ತಾರೆ. ಕೆಲವರು ಇತರರಿಗೆ ಮಾದರಿಯಾಗಿ ಬದುಕುತ್ತಾರೆ, ಕೆಲವರು ಎಚ್ಚರಿಕೆ ಕೊಡುವ ರೀತಿಯಲ್ಲಿ ಬದುಕುತ್ತಾರೆ. ಜೈಲಿಗೆ ಹೋಗಿ ಬಂದವರು ಎಚ್ಚರಿಕೆಯ ಪ್ರತೀಕವಾಗುತ್ತಾರೆ ಅಥವಾ ತೊಂದರೆ ನೀಡುವ ಮೂಲಕ ನಾಶವಾಗುತ್ತಾರೆ” ಎಂಬ ಹೇಳಿಕೆಯಿಂದ ಡಿಬಾಸ್‌ನ್ನು ಉಲ್ಲೇಖಿಸಿರುವಂತೆ ಜನರು ಅರ್ಥೈಸಿದ್ದಾರೆ.

ಮತ್ತೊಂದು ಮಹತ್ವದ ಮಾತಿನಲ್ಲಿ ಅವರು, “ದೊಡ್ಡವರನ್ನೆಲ್ಲಾ ಯಾಕೆ ಎದುರು ಹಾಕಿಕೊಳ್ಳುತ್ತಾ ಇರುತ್ತೀಯಾ ಅಂತ ಕೆಲವರು ಕೇಳ್ತಾರೆ. ಆದರೆ ನಿಜ ಹೇಳ್ಬೇಕಂದ್ರೆ, ನಾನು ಯಾರನ್ನೂ ಎದುರು ಹಾಕಿಕೊಳ್ಳಲ್ಲ… ಅವರು ನನ್ನನ್ನು ಎದುರು ಹಾಕಿಕೊಳ್ಳುತ್ತಾರೆ. ನಾನು ಯಾರಿಗಾದರೂ ಭಯಪಡೋಂಥವನು ಅಲ್ಲ” ಎಂದು ಹೇಳಿದ್ದಾರೆ.

ಇದೇ ಭಾಷಣದ ಹಿನ್ನಲೆಯಲ್ಲಿ, ಉಮಾಪತಿ ಮತ್ತೆ ದರ್ಶನ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂಬ ಅಭಿಪ್ರಾಯಗಳು ಎದ್ದಿವೆ. ಈಗ ಈ ಮಾತುಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಅಥವಾ ಸಿನಿಮಾ ಲೋಕದ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬ ಕುತೂಹಲ ಮೂಡಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago