ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ ಉಮಾಪತಿ ಅವರ ಮಾತುಗಳು.
‘ರಾಬರ್ಟ್’ ಸಿನಿಮಾದ ಟೈಟಲ್ ವಿವಾದದಿಂದ ಶುರುವಾದ ದರ್ಶನ್ ಮತ್ತು ಉಮಾಪತಿ ನಡುವಿನ ದ್ವೇಷ, ತಗಡು ಎಂಬ ಪದ ಬಳಕೆಯಿಂದ ಮತ್ತಷ್ಟು ಉಲ್ಬಣಗೊಂಡಿತ್ತು. ಈಗ ಉಮಾಪತಿ ಅವರು ನೀಡಿರುವ ಹೊಸ ಹೇಳಿಕೆ, ಈ ಬಾಂಬನ್ನು ಮತ್ತೊಮ್ಮೆ ಸಿಡಿಸಿರುವಂತಾಗಿದೆ.
ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮದಲ್ಲಿ ನಡೆದ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಮಾಪತಿ ಮಾತನಾಡುತ್ತಾ, “ಈ ಜಗತ್ತಿನಲ್ಲಿ ಎರಡು ರೀತಿಯ ಜನರು ಇರುತ್ತಾರೆ. ಕೆಲವರು ಇತರರಿಗೆ ಮಾದರಿಯಾಗಿ ಬದುಕುತ್ತಾರೆ, ಕೆಲವರು ಎಚ್ಚರಿಕೆ ಕೊಡುವ ರೀತಿಯಲ್ಲಿ ಬದುಕುತ್ತಾರೆ. ಜೈಲಿಗೆ ಹೋಗಿ ಬಂದವರು ಎಚ್ಚರಿಕೆಯ ಪ್ರತೀಕವಾಗುತ್ತಾರೆ ಅಥವಾ ತೊಂದರೆ ನೀಡುವ ಮೂಲಕ ನಾಶವಾಗುತ್ತಾರೆ” ಎಂಬ ಹೇಳಿಕೆಯಿಂದ ಡಿಬಾಸ್ನ್ನು ಉಲ್ಲೇಖಿಸಿರುವಂತೆ ಜನರು ಅರ್ಥೈಸಿದ್ದಾರೆ.
ಮತ್ತೊಂದು ಮಹತ್ವದ ಮಾತಿನಲ್ಲಿ ಅವರು, “ದೊಡ್ಡವರನ್ನೆಲ್ಲಾ ಯಾಕೆ ಎದುರು ಹಾಕಿಕೊಳ್ಳುತ್ತಾ ಇರುತ್ತೀಯಾ ಅಂತ ಕೆಲವರು ಕೇಳ್ತಾರೆ. ಆದರೆ ನಿಜ ಹೇಳ್ಬೇಕಂದ್ರೆ, ನಾನು ಯಾರನ್ನೂ ಎದುರು ಹಾಕಿಕೊಳ್ಳಲ್ಲ… ಅವರು ನನ್ನನ್ನು ಎದುರು ಹಾಕಿಕೊಳ್ಳುತ್ತಾರೆ. ನಾನು ಯಾರಿಗಾದರೂ ಭಯಪಡೋಂಥವನು ಅಲ್ಲ” ಎಂದು ಹೇಳಿದ್ದಾರೆ.
ಇದೇ ಭಾಷಣದ ಹಿನ್ನಲೆಯಲ್ಲಿ, ಉಮಾಪತಿ ಮತ್ತೆ ದರ್ಶನ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂಬ ಅಭಿಪ್ರಾಯಗಳು ಎದ್ದಿವೆ. ಈಗ ಈ ಮಾತುಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಅಥವಾ ಸಿನಿಮಾ ಲೋಕದ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬ ಕುತೂಹಲ ಮೂಡಿದೆ.
ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…