Latest

ಉಮಾಪತಿ ಭಾಷಣದಲ್ಲಿ ದರ್ಶನ್ ವಿರುದ್ಧ ಮತ್ತೊಮ್ಮೆ ಕಿಡಿಕಾರಿಕೆ..

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ ಉಮಾಪತಿ ಅವರ ಮಾತುಗಳು.

‘ರಾಬರ್ಟ್’ ಸಿನಿಮಾದ ಟೈಟಲ್ ವಿವಾದದಿಂದ ಶುರುವಾದ ದರ್ಶನ್ ಮತ್ತು ಉಮಾಪತಿ ನಡುವಿನ ದ್ವೇಷ, ತಗಡು ಎಂಬ ಪದ ಬಳಕೆಯಿಂದ ಮತ್ತಷ್ಟು ಉಲ್ಬಣಗೊಂಡಿತ್ತು. ಈಗ ಉಮಾಪತಿ ಅವರು ನೀಡಿರುವ ಹೊಸ ಹೇಳಿಕೆ, ಈ ಬಾಂಬನ್ನು ಮತ್ತೊಮ್ಮೆ ಸಿಡಿಸಿರುವಂತಾಗಿದೆ.

ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮದಲ್ಲಿ ನಡೆದ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಮಾಪತಿ ಮಾತನಾಡುತ್ತಾ, “ಈ ಜಗತ್ತಿನಲ್ಲಿ ಎರಡು ರೀತಿಯ ಜನರು ಇರುತ್ತಾರೆ. ಕೆಲವರು ಇತರರಿಗೆ ಮಾದರಿಯಾಗಿ ಬದುಕುತ್ತಾರೆ, ಕೆಲವರು ಎಚ್ಚರಿಕೆ ಕೊಡುವ ರೀತಿಯಲ್ಲಿ ಬದುಕುತ್ತಾರೆ. ಜೈಲಿಗೆ ಹೋಗಿ ಬಂದವರು ಎಚ್ಚರಿಕೆಯ ಪ್ರತೀಕವಾಗುತ್ತಾರೆ ಅಥವಾ ತೊಂದರೆ ನೀಡುವ ಮೂಲಕ ನಾಶವಾಗುತ್ತಾರೆ” ಎಂಬ ಹೇಳಿಕೆಯಿಂದ ಡಿಬಾಸ್‌ನ್ನು ಉಲ್ಲೇಖಿಸಿರುವಂತೆ ಜನರು ಅರ್ಥೈಸಿದ್ದಾರೆ.

ಮತ್ತೊಂದು ಮಹತ್ವದ ಮಾತಿನಲ್ಲಿ ಅವರು, “ದೊಡ್ಡವರನ್ನೆಲ್ಲಾ ಯಾಕೆ ಎದುರು ಹಾಕಿಕೊಳ್ಳುತ್ತಾ ಇರುತ್ತೀಯಾ ಅಂತ ಕೆಲವರು ಕೇಳ್ತಾರೆ. ಆದರೆ ನಿಜ ಹೇಳ್ಬೇಕಂದ್ರೆ, ನಾನು ಯಾರನ್ನೂ ಎದುರು ಹಾಕಿಕೊಳ್ಳಲ್ಲ… ಅವರು ನನ್ನನ್ನು ಎದುರು ಹಾಕಿಕೊಳ್ಳುತ್ತಾರೆ. ನಾನು ಯಾರಿಗಾದರೂ ಭಯಪಡೋಂಥವನು ಅಲ್ಲ” ಎಂದು ಹೇಳಿದ್ದಾರೆ.

ಇದೇ ಭಾಷಣದ ಹಿನ್ನಲೆಯಲ್ಲಿ, ಉಮಾಪತಿ ಮತ್ತೆ ದರ್ಶನ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂಬ ಅಭಿಪ್ರಾಯಗಳು ಎದ್ದಿವೆ. ಈಗ ಈ ಮಾತುಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಅಥವಾ ಸಿನಿಮಾ ಲೋಕದ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬ ಕುತೂಹಲ ಮೂಡಿದೆ.

nazeer ahamad

Recent Posts

400 ವರ್ಷ ಹಿಂದಿನ ರಾಜನೆಂದು ಹೇಳುತ್ತಿರುವ 10 ವರ್ಷದ ಬಾಲಕ: ಪುನರ್ಜನ್ಮದ ರಹಸ್ಯವೇ?

ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…

12 hours ago

ಅನೈತಿಕ ಸಂಬಂಧ: ಪವಿತ್ರಾಳನ್ನು ಪಡೆಯಲು ಆಕೆಯ ಗಂಡನನ್ನೇ ಕೊಂದ ಪ್ರಿಯಕರ..!

ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…

12 hours ago

ಪೂಲ್‌ನಲ್ಲಿ ಬಾಯ್ ಫ್ರೆಂಡ್ ನೊಂದಿಗೆ ಮಹಿಳೆ ರೋಮ್ಯಾನ್ಸ್: ದಿಡೀರನೆ ಬಂದ ಗಂಡ..! ವೈರಲ್ ವಿಡಿಯೋ

ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ತನ್ನ ಬಾಯ್‌ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…

18 hours ago

ಕೆಐಎಡಿಬಿ 16 ಕೋಟಿ ವಂಚನೆ: ಪ್ರಮುಖ ಆರೋಪಿ ಪೊಲೀಸರ ವಶಕ್ಕೆ

ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…

22 hours ago

ನಾಸಿಕ್ ಟಿಸಿಎಸ್ ಪ್ರಕರಣ: ಆರೋಪಿಗಳ ಪರ ನಿಂತಿದ್ದ ಎಚ್‌ಆರ್ ಮ್ಯಾನೇಜರ್ ನಿದಾ ಖಾನ್ ಪಾತ್ರ ಬಹಿರಂಗ

ನಾಸಿಕ್‌ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್‌ಆರ್…

22 hours ago

ಗೃಹಲಕ್ಷ್ಮಿ ಹಣ ಕೂಡಿಟ್ಟು ಐಸ್ ಕ್ರೀಮ್ ಅಂಗಡಿ ತೆರೆದ ಮಹಿಳೆ!

ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…

22 hours ago