ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ ಎಳೆದಿದೆ. ಈ ಬಾರಿ ಕಾರಣ, ನಿರ್ಮಾಪಕ ಉಮಾಪತಿ ಅವರ ಮಾತುಗಳು.
‘ರಾಬರ್ಟ್’ ಸಿನಿಮಾದ ಟೈಟಲ್ ವಿವಾದದಿಂದ ಶುರುವಾದ ದರ್ಶನ್ ಮತ್ತು ಉಮಾಪತಿ ನಡುವಿನ ದ್ವೇಷ, ತಗಡು ಎಂಬ ಪದ ಬಳಕೆಯಿಂದ ಮತ್ತಷ್ಟು ಉಲ್ಬಣಗೊಂಡಿತ್ತು. ಈಗ ಉಮಾಪತಿ ಅವರು ನೀಡಿರುವ ಹೊಸ ಹೇಳಿಕೆ, ಈ ಬಾಂಬನ್ನು ಮತ್ತೊಮ್ಮೆ ಸಿಡಿಸಿರುವಂತಾಗಿದೆ.
ಸಿದ್ದಾಪುರ ತಾಲೂಕಿನ ಹಲಗಡಿಕೊಪ್ಪ ಗ್ರಾಮದಲ್ಲಿ ನಡೆದ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಉಮಾಪತಿ ಮಾತನಾಡುತ್ತಾ, “ಈ ಜಗತ್ತಿನಲ್ಲಿ ಎರಡು ರೀತಿಯ ಜನರು ಇರುತ್ತಾರೆ. ಕೆಲವರು ಇತರರಿಗೆ ಮಾದರಿಯಾಗಿ ಬದುಕುತ್ತಾರೆ, ಕೆಲವರು ಎಚ್ಚರಿಕೆ ಕೊಡುವ ರೀತಿಯಲ್ಲಿ ಬದುಕುತ್ತಾರೆ. ಜೈಲಿಗೆ ಹೋಗಿ ಬಂದವರು ಎಚ್ಚರಿಕೆಯ ಪ್ರತೀಕವಾಗುತ್ತಾರೆ ಅಥವಾ ತೊಂದರೆ ನೀಡುವ ಮೂಲಕ ನಾಶವಾಗುತ್ತಾರೆ” ಎಂಬ ಹೇಳಿಕೆಯಿಂದ ಡಿಬಾಸ್ನ್ನು ಉಲ್ಲೇಖಿಸಿರುವಂತೆ ಜನರು ಅರ್ಥೈಸಿದ್ದಾರೆ.
ಮತ್ತೊಂದು ಮಹತ್ವದ ಮಾತಿನಲ್ಲಿ ಅವರು, “ದೊಡ್ಡವರನ್ನೆಲ್ಲಾ ಯಾಕೆ ಎದುರು ಹಾಕಿಕೊಳ್ಳುತ್ತಾ ಇರುತ್ತೀಯಾ ಅಂತ ಕೆಲವರು ಕೇಳ್ತಾರೆ. ಆದರೆ ನಿಜ ಹೇಳ್ಬೇಕಂದ್ರೆ, ನಾನು ಯಾರನ್ನೂ ಎದುರು ಹಾಕಿಕೊಳ್ಳಲ್ಲ… ಅವರು ನನ್ನನ್ನು ಎದುರು ಹಾಕಿಕೊಳ್ಳುತ್ತಾರೆ. ನಾನು ಯಾರಿಗಾದರೂ ಭಯಪಡೋಂಥವನು ಅಲ್ಲ” ಎಂದು ಹೇಳಿದ್ದಾರೆ.
ಇದೇ ಭಾಷಣದ ಹಿನ್ನಲೆಯಲ್ಲಿ, ಉಮಾಪತಿ ಮತ್ತೆ ದರ್ಶನ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಎಂಬ ಅಭಿಪ್ರಾಯಗಳು ಎದ್ದಿವೆ. ಈಗ ಈ ಮಾತುಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಅಥವಾ ಸಿನಿಮಾ ಲೋಕದ ಬೆಳವಣಿಗೆಗಳಿಗೆ ದಾರಿ ಮಾಡಿಕೊಡುತ್ತವೆ ಎಂಬ ಕುತೂಹಲ ಮೂಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…