ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಒಂದು ಗ್ರಾಮದಲ್ಲಿ ಶೋಕಾಂತ ಘಟನೆ ನಡೆದಿದೆ. ಪಕ್ಕದ ಮನೆಯ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದ ಬೇಸತ್ತ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಜೀವವನ್ನೇ ಕೊನೆಗೊಳಿಸಿದ್ದಾಳೆ. ಈ ಘಟನೆ ಏಪ್ರಿಲ್ 30ರ ಬುಧವಾರ ನಡೆದಿದೆ.

ಆತ್ಮಹತ್ಯೆಗೆ ಮುನ್ನ ಬರೆದಿದ್ದ ಡೆತ್ ನೋಟ್‌ನಲ್ಲಿ ಬಾಲಕಿ, ಪಕ್ಕದ ಮನೆಯ ಸುರೇಶ ಎಂಬಾತನೇ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿದ್ದಾನೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. “ಅವನನ್ನು ಬಿಡಬೇಡಿ” ಎಂಬ ವಿನಂತಿಯನ್ನೂ ಮಾಡಿರುವ ಬಾಲಕಿ, ದುಃಖಭರಿತ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ.

ಘಟನೆ ನಡೆದ ದಿನ ಬಾಲಕಿಯ ಪೋಷಕರು ಸಂಬಂಧಿಕರ ಮದುವೆಗೆ ತೆರಳಿದ್ದು, ಈ ಸಂದರ್ಭ ಮನೆಯಲ್ಲಿ ಆಕೆ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಸುರೇಶ ಬಳಲಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಈ ಸಂಬಂಧ ತಕ್ಷಣ ಕ್ರಮ ಕೈಗೊಂಡ ತೋರಣಗಲ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯು ಸ್ಥಳೀಯರಲ್ಲಿ ಆಕ್ರೋಶ ಮತ್ತು ದುಃಖವನ್ನು ಉಂಟುಮಾಡಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹ ವ್ಯಕ್ತವಾಗಿದೆ.

error: Content is protected !!