ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಒಂದು ಗ್ರಾಮದಲ್ಲಿ ಶೋಕಾಂತ ಘಟನೆ ನಡೆದಿದೆ. ಪಕ್ಕದ ಮನೆಯ ವ್ಯಕ್ತಿಯ ಮಾನಸಿಕ ಹಾಗೂ ದೈಹಿಕ ಕಿರುಕುಳದಿಂದ ಬೇಸತ್ತ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಜೀವವನ್ನೇ ಕೊನೆಗೊಳಿಸಿದ್ದಾಳೆ. ಈ ಘಟನೆ ಏಪ್ರಿಲ್ 30ರ ಬುಧವಾರ ನಡೆದಿದೆ.
ಆತ್ಮಹತ್ಯೆಗೆ ಮುನ್ನ ಬರೆದಿದ್ದ ಡೆತ್ ನೋಟ್ನಲ್ಲಿ ಬಾಲಕಿ, ಪಕ್ಕದ ಮನೆಯ ಸುರೇಶ ಎಂಬಾತನೇ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿದ್ದಾನೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. “ಅವನನ್ನು ಬಿಡಬೇಡಿ” ಎಂಬ ವಿನಂತಿಯನ್ನೂ ಮಾಡಿರುವ ಬಾಲಕಿ, ದುಃಖಭರಿತ ದಿಟ್ಟ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾಳೆ.
ಘಟನೆ ನಡೆದ ದಿನ ಬಾಲಕಿಯ ಪೋಷಕರು ಸಂಬಂಧಿಕರ ಮದುವೆಗೆ ತೆರಳಿದ್ದು, ಈ ಸಂದರ್ಭ ಮನೆಯಲ್ಲಿ ಆಕೆ ಒಬ್ಬಳೇ ಇದ್ದ ಸಂದರ್ಭದಲ್ಲಿ ಆರೋಪಿ ಸುರೇಶ ಬಳಲಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂಬಂಧ ತಕ್ಷಣ ಕ್ರಮ ಕೈಗೊಂಡ ತೋರಣಗಲ್ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ. ಘಟನೆಯು ಸ್ಥಳೀಯರಲ್ಲಿ ಆಕ್ರೋಶ ಮತ್ತು ದುಃಖವನ್ನು ಉಂಟುಮಾಡಿದ್ದು, ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹ ವ್ಯಕ್ತವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…