Latest

ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಆತ್ಮಹತ್ಯೆ

ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೇ ಅಪಘಾತದಲ್ಲಿ ಪವಿತ್ರಾ ಬಾಯ್ ಫ್ರೆಂಡ್​, ನಟ ಚಂದ್ರಕಾಂತ್ ಗಾಯಗೊಂಡಿದ್ದರು. ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿ ಪವಿತ್ರಾ ಜಯರಾಮ್ ಕನ್ನಡ ಸೇರಿದಂತೆ ಬೇರೆ ಭಾಷೆಯ ಹಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಆದರೆ, ಚಂದ್ರಕಾಂತ್ ಕೂಡ ಮದುವೆಯಾಗಿದ್ದವರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೆ, ಪವಿತ್ರಾ ಅವರ ಸ್ನೇಹವಾದ ನಂತರ ಕುಟುಂಬದಿಂದ ದೂರ ಉಳಿದಿದ್ದರು ಎಂದು ತಿಳಿದುಬಂದಿದೆ.
ಪವಿತ್ರಾ ಅಪಘಾತದಲ್ಲಿ ಸಾವನ್ನಪ್ಪಿದ್ದರಿಂದ ಚಂದ್ರಕಾಂತ್ ಖಿನ್ನತೆಗೆ ಒಳಗಾಗಿದ್ದರು. ಅವರಿಲ್ಲದ ಜಗತ್ತಿನಲ್ಲಿ ತಾನು ಇರಲು ಸಾಧ್ಯವಿಲ್ಲ ಎಂದೂ, ಆಕೆಯ ಬಗ್ಗೆ ಸರಣಿ ಪೋಸ್ಟ್‌ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಕೂಡ ಮಾಡಿದ್ದರು. ಚಂದ್ರಕಾಂತ್ ಎರಡು ದಿನ ಕಾಯುವಂತೆ ಹೇಳಿ ಪೋಸ್ಟ್ ಮಾಡಿದ್ದರು ಆದರೆ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ನಾವು ಚಂದು ಮೊಬೈಲ್​ ಗೆ ಫೋನ್ ಮಾಡಿದ್ವಿ. ಆದ್ರೆ ಅವರು ಫೋನ್ ತೆಗೆದುಕೊಳ್ಳಲಿಲ್ಲ, ಬಳಿಕ ನಾವು ನಮಗೆ ತಿಳಿದಿರುವವರನ್ನು ಅವರ ಫ್ಲಾಟ್‌ ಗೆ ಕಳುಹಿಸಿದ್ದೆ. ಅಲ್ಲಿ ಬಾಗಿಲು ಒಡೆದು ನೋಡಿದಾಗ ಚಂದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂತು ಎಂದು ಚಂದ್ರಕಾಂತ್ ಪತ್ನಿ ಶಿಲ್ಪಾ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

1 day ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago