Latest

ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಆತ್ಮಹತ್ಯೆ

ಧಾರಾವಾಹಿ ನಟಿ ಪವಿತ್ರಾ ಜಯರಾಮ್ ಅವರು ಕಳೆದ ಭಾನುವಾರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದೇ ಅಪಘಾತದಲ್ಲಿ ಪವಿತ್ರಾ ಬಾಯ್ ಫ್ರೆಂಡ್​, ನಟ ಚಂದ್ರಕಾಂತ್ ಗಾಯಗೊಂಡಿದ್ದರು. ಪವಿತ್ರಾ ಸಾವನ್ನು ಸಹಿಸಲಾಗದೆ ಚಂದ್ರಕಾಂತ್ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿ ಪವಿತ್ರಾ ಜಯರಾಮ್ ಕನ್ನಡ ಸೇರಿದಂತೆ ಬೇರೆ ಭಾಷೆಯ ಹಲವು ಧಾರಾವಾಹಿಗಳಲ್ಲಿ ಕೆಲಸ ಮಾಡಿದ್ದಾರೆ. ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದು ಗೊತ್ತೇ ಇದೆ. ಆದರೆ, ಚಂದ್ರಕಾಂತ್ ಕೂಡ ಮದುವೆಯಾಗಿದ್ದವರು. ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೆ, ಪವಿತ್ರಾ ಅವರ ಸ್ನೇಹವಾದ ನಂತರ ಕುಟುಂಬದಿಂದ ದೂರ ಉಳಿದಿದ್ದರು ಎಂದು ತಿಳಿದುಬಂದಿದೆ.
ಪವಿತ್ರಾ ಅಪಘಾತದಲ್ಲಿ ಸಾವನ್ನಪ್ಪಿದ್ದರಿಂದ ಚಂದ್ರಕಾಂತ್ ಖಿನ್ನತೆಗೆ ಒಳಗಾಗಿದ್ದರು. ಅವರಿಲ್ಲದ ಜಗತ್ತಿನಲ್ಲಿ ತಾನು ಇರಲು ಸಾಧ್ಯವಿಲ್ಲ ಎಂದೂ, ಆಕೆಯ ಬಗ್ಗೆ ಸರಣಿ ಪೋಸ್ಟ್‌ಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಕೂಡ ಮಾಡಿದ್ದರು. ಚಂದ್ರಕಾಂತ್ ಎರಡು ದಿನ ಕಾಯುವಂತೆ ಹೇಳಿ ಪೋಸ್ಟ್ ಮಾಡಿದ್ದರು ಆದರೆ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ನೆ ನಾವು ಚಂದು ಮೊಬೈಲ್​ ಗೆ ಫೋನ್ ಮಾಡಿದ್ವಿ. ಆದ್ರೆ ಅವರು ಫೋನ್ ತೆಗೆದುಕೊಳ್ಳಲಿಲ್ಲ, ಬಳಿಕ ನಾವು ನಮಗೆ ತಿಳಿದಿರುವವರನ್ನು ಅವರ ಫ್ಲಾಟ್‌ ಗೆ ಕಳುಹಿಸಿದ್ದೆ. ಅಲ್ಲಿ ಬಾಗಿಲು ಒಡೆದು ನೋಡಿದಾಗ ಚಂದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂತು ಎಂದು ಚಂದ್ರಕಾಂತ್ ಪತ್ನಿ ಶಿಲ್ಪಾ ಹೇಳಿದ್ದಾರೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

7 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

7 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

7 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

7 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

22 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

22 hours ago