ತನ್ನ ಪತ್ನಿಗೆ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಯ್ ಕಿರುಕುಳ ನೀಡುತ್ತಿದ್ದ ಎಂದು ಸೌಮ್ಯಾ ಪತಿ, ನಿವೃತ್ತ ಸೇನಾ ಯೋಧ ದೂರಿದ್ದಾರೆ. ಈ ಕುರಿತು ಸೌಮ್ಯ ತಾಯಿ ಭವಾನಿ ಮಡಿಕೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ಕೈಗೊಂಡು ಎಇಇ ವಿನಯ್ ವಿರುದ್ಧ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಬದಲು, ವಿದ್ಯೆ ಇದೆಯೆಂದು ಉದ್ಯೋಗಕ್ಕೆ ಸೇರಿದ ಮಹಿಳೆಗೆ ಹಿರಿಯ ಅಧಿಕಾರಿ ಕಿರುಕುಳ ನೀಡಿದರು ಎಂದು ಆರೋಪಿಸಿ, ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಎಂಜಿನಿಯರ್ ಪರಾರಿಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದವರಾದ ಸೌಮ್ಯಾ (39) ಮನೆಯಲ್ಲಿ ಖಾಲಿಯಾಗಿರುವುದು ಬೇಡವೆಂದು ಕೆಲಸಕ್ಕೆ ಸೇರಿಕೊಂಡರು. ಮೇ ತಿಂಗಳಲ್ಲಿ ಮಡಿಕೇರಿ ಸೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್ ಆಪರೇಟರ್ ಆಗಿ ಸೇರಿದ್ದರು.
ಆದರೆ ಅದೇ ಕಚೇರಿಯಲ್ಲಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಕಣ್ಣು ಈಕೆಯ ಮೇಲೆ ಬಿದ್ದಿದೆ. ಆಕೆಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದ್ದಾನೆ. ವಾಟ್ಸಾಪ್ ನಲ್ಲಿ ಚಾಟ್ ಮಾಡುವಂತೆ ಸೌಮ್ಯಾಗೆ ಕಿರುಕುಳ ನೀಡಲಾರಂಭಿಸಿದ್ದ ಎಂದು ದೂರಲಾಗಿದೆ. ಕೊನೆಗೆ, ಕಿರುಕುಳ ತಾಳಲಾರದೆ ಸೌಮ್ಯಾ ಮಂಗಳವಾರ ಮನೆಯಲ್ಲಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…